Featured

ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ : PFI ಗೆ ಕೇರಳ ಹೈಕೋರ್ಟ್ – Vishwanews24

ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ..

ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಹೈಕೋರ್ಟ್​​ ಸೂಚನೆ..

ತಿರುವನಂತಪುರಂ: ಪಿಎಫ್​ಐ ಕಚೇರಿಗಳ ಮೇಲೆ ಎನ್​ಐಎ ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೇರಳದಲ್ಲಿ ಬಂದ್​ಗೆ ಕೂಡ ಕರೆ ನೀಡಲಾಗಿದೆ.

ಬಂದ್​ಗೆ ಕರೆ ನೀಡಿರುವ ಪಿಎಫ್​ಐ  ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಇಂದು (ಶುಕ್ರವಾರ) ಸುಯೊ ಮೋಟೋ ದಾಖಲಿಸಿಕೊಂಡಿದೆ. 12 ಗಂಟೆಗಳ ಪ್ರತಿಭಟನೆಯ ಮಧ್ಯೆ ಬಂದ್​ಗೆ ಕರೆ ನೀಡಲಾಗಿದೆ. ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪಿಎಫ್​​ಐ ಕಚೇರಿ ಮೇಲೆ ಎನ್​ಐಎ ದಾಳಿ ಖಂಡಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಪೊಲೀಸರಿಗೆ ಹೈಕೋರ್ಟ್​​ ಸೂಚನೆ ನೀಡಿದೆ. ಅಲ್ಲದೆ, ಅಂಥವರ ವಿರುದ್ಧ ಸ್ವಯಂಪ್ರೇರಿತ ಕೇಸ್​ ದಾಖಲಿಸುವಂತೆ ಹೈಕೋರ್ಟ್​​ ಸೂಚನೆ ನೀಡಿದೆ. ಕೇರಳ ಬಂದ್​ಗೆ ಪಾಪ್ಯುಲರ್​ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್​ಐ ನಾಯಕರ ವಿರುದ್ಧ ಕ್ರಮಕ್ಕೆ ಕೋರ್ಟ್​ ಸೂಚನೆ ನೀಡಿದೆ.

ಕೇರಳ ರಾಜ್ಯ ಪೊಲೀಸರು “ಸರ್ಕಾರ ಮತ್ತು ಮುಷ್ಕರಕ್ಕಾಗಿ ಕರೆಯನ್ನು ಬೆಂಬಲಿಸದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿ ಅಥವಾ ವಿನಾಶವಾಗದಂತೆ ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು” ಎಂದು ಹೈಕೋರ್ಟ್ ಹೇಳಿದೆ. ಇಂದು ಬಂದ್ ಪ್ರಾರಂಭವಾಗುತ್ತಿದ್ದಂತೆ ಕೇರಳ ರಾಜ್ಯ ನಡೆಸುವ ಬಸ್ಸುಗಳ ಮೇಲೆ ಕಲ್ಲು ತೂರಾಟ ಮತ್ತು ದಾಳಿಯ ಘಟನೆಗಳು ವರದಿಯಾಗಿವೆ. 15 ರಾಜ್ಯಗಳು ಮತ್ತು 102 ಸ್ಥಳಗಳಲ್ಲಿ ಗುರುವಾರ ದಾಳಿ ನಡೆಸಲಾಯಿತು.

ಇದನ್ನೂ ಓದಿ: ಗಾಂಧಿ ಕುಟುಂಬದಿಂದ ಕಾಂಗ್ರೆಸ್‌ನ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ : ಅಶೋಕ್ ಗೆಹ್ಲೋಟ್ ಸ್ಪಷ್ಟನೆ 

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago