Featured

ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ : PFI ಗೆ ಕೇರಳ ಹೈಕೋರ್ಟ್ – Vishwanews24

ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ..

ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಹೈಕೋರ್ಟ್​​ ಸೂಚನೆ..

ತಿರುವನಂತಪುರಂ: ಪಿಎಫ್​ಐ ಕಚೇರಿಗಳ ಮೇಲೆ ಎನ್​ಐಎ ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೇರಳದಲ್ಲಿ ಬಂದ್​ಗೆ ಕೂಡ ಕರೆ ನೀಡಲಾಗಿದೆ.

ಬಂದ್​ಗೆ ಕರೆ ನೀಡಿರುವ ಪಿಎಫ್​ಐ  ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಇಂದು (ಶುಕ್ರವಾರ) ಸುಯೊ ಮೋಟೋ ದಾಖಲಿಸಿಕೊಂಡಿದೆ. 12 ಗಂಟೆಗಳ ಪ್ರತಿಭಟನೆಯ ಮಧ್ಯೆ ಬಂದ್​ಗೆ ಕರೆ ನೀಡಲಾಗಿದೆ. ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪಿಎಫ್​​ಐ ಕಚೇರಿ ಮೇಲೆ ಎನ್​ಐಎ ದಾಳಿ ಖಂಡಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಪೊಲೀಸರಿಗೆ ಹೈಕೋರ್ಟ್​​ ಸೂಚನೆ ನೀಡಿದೆ. ಅಲ್ಲದೆ, ಅಂಥವರ ವಿರುದ್ಧ ಸ್ವಯಂಪ್ರೇರಿತ ಕೇಸ್​ ದಾಖಲಿಸುವಂತೆ ಹೈಕೋರ್ಟ್​​ ಸೂಚನೆ ನೀಡಿದೆ. ಕೇರಳ ಬಂದ್​ಗೆ ಪಾಪ್ಯುಲರ್​ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್​ಐ ನಾಯಕರ ವಿರುದ್ಧ ಕ್ರಮಕ್ಕೆ ಕೋರ್ಟ್​ ಸೂಚನೆ ನೀಡಿದೆ.

ಕೇರಳ ರಾಜ್ಯ ಪೊಲೀಸರು “ಸರ್ಕಾರ ಮತ್ತು ಮುಷ್ಕರಕ್ಕಾಗಿ ಕರೆಯನ್ನು ಬೆಂಬಲಿಸದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿ ಅಥವಾ ವಿನಾಶವಾಗದಂತೆ ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು” ಎಂದು ಹೈಕೋರ್ಟ್ ಹೇಳಿದೆ. ಇಂದು ಬಂದ್ ಪ್ರಾರಂಭವಾಗುತ್ತಿದ್ದಂತೆ ಕೇರಳ ರಾಜ್ಯ ನಡೆಸುವ ಬಸ್ಸುಗಳ ಮೇಲೆ ಕಲ್ಲು ತೂರಾಟ ಮತ್ತು ದಾಳಿಯ ಘಟನೆಗಳು ವರದಿಯಾಗಿವೆ. 15 ರಾಜ್ಯಗಳು ಮತ್ತು 102 ಸ್ಥಳಗಳಲ್ಲಿ ಗುರುವಾರ ದಾಳಿ ನಡೆಸಲಾಯಿತು.

ಇದನ್ನೂ ಓದಿ: ಗಾಂಧಿ ಕುಟುಂಬದಿಂದ ಕಾಂಗ್ರೆಸ್‌ನ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ : ಅಶೋಕ್ ಗೆಹ್ಲೋಟ್ ಸ್ಪಷ್ಟನೆ 

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago