ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ ಬಾವುಟಗಳ ವಶ…..

Featured, ರಾಜ್ಯ ನ್ಯೂಸ್

ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಬಾವುಟಗಳನ್ನು ಅನುಮತಿ ಇಲ್ಲದೇ ತಂದಿದ್ದರು ಎನ್ನಲಾಗಿದೆ. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟಗಳನ್ನು ಶಿವಮೊಗ್ಗ ಉಪ ವಿಭಾಗಾಧಿಕಾರಿ ದಾಸರಗೌಡ ನೇತೃತ್ವದ ತಂಡ ವಶಪಡಿಸಿಕೊಂಡು ಕೇಸು ದಾಖಲಿಸಿಕೊಂಡಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಮೂಲಕ ಬಿರುಸಿನ ಪ್ರಚಾರ ನಡೆಸಿದ್ದು, ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಶಿವಮೊಗ್ಗದಲ್ಲಿ ಮಾತ್ರ ರಾಹುಲ್ ಗಾಂಧಿ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಶಿವಮೊಗ್ಗಕ್ಕೆ ಆಗಮಿಸಿದ್ದರು.