Featured

ಅನುಮತಿ ಪಡೆಯದೇ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ – Vishwanews24

ಅನುಮತಿ ಪಡೆಯದೇ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆಯ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಅನಧಿಕೃತವಾಗಿ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆದೇಶದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳ ವಿಶೇಷಾಧಿಕಾರಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ, ಮುಂಚಿತವಾಗಿಯೇ, ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವಂತೆ ಸೂಚಿಸಲಾಗಿದೆ.

ಇನ್ನೂ ಒಂದು ವೇಳೆ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ, ಶಿಸ್ತು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿದೆ.

ನಿನ್ನ ತಡರಾತ್ರಿಯವರೆಗೆ ಸಿಎಂ ಬೊಮ್ಮಾಯಿ ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಬೇಡಿಕೆ ಈಡೇರಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಎಂ ಬೊಮ್ಮಾಯಿಯವರು ಶೇ.7 ರಿಂದ 8ರಷ್ಟು ಮಧ್ಯಂತರ ವೇತನ ಜಾರಿಗೊಳಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದ್ರೇ ಇದಕ್ಕೆ ನೌಕರರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಎಚ್ಚರಿಕೆಯ ನಡುವೆ ಆಗಲಿದೆ ಎಂದು ಹೇಳಲಾಗುತ್ತಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

18 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

18 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

18 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

18 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

20 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago