ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಇದರಿಂದಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ.
ಬಳಿಕ ನ್ಯಾಯಾಲಯ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…