ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಇದರಿಂದಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ.
ಬಳಿಕ ನ್ಯಾಯಾಲಯ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…