Featured

ಅನುಮಾನವೇ ಬೇಡ, ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿಯೇ ಕಟ್ಟುತ್ತೇವೆ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಬಾಗಲಕೋಟೆ: ಅನುಮಾನವೇ ಬೇಡ ಅಯೋಧ್ಯೆಯಲ್ಲಿ ರಾಮಂದಿರ ಕಟ್ಟಿಯೇ ಕಟ್ಟುತ್ತೇವೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಮಾನವೇ ಬೇಡ, ನೂರಕ್ಕೆ ನೂರು ರಾಮ ಮಂದಿರ ಕಟ್ಟಿಯೇ ಕಟ್ಟುತ್ತೇವೆ. ಸುಪ್ರೀಂ ಕೋರ್ಟ್ ರಾಮ ಮಂದಿರದ ಪರವಾಗಿಯೇ ತೀರ್ಪು ಕೊಡಬೇಕು. ಅದನ್ನ ಬಿಟ್ಟು ಸುಪ್ರೀಂ ಕೋರ್ಟಿಗೆ ಬೇರೆ ದಾರಿಯೇ ಇಲ್ಲ. ಅಲ್ಲಿರುವ ಎಲ್ಲ ದಾಖಲೆಗಳನ್ನು ಈಗಾಗಲೇ ಕೊಟ್ಟಿದ್ದಾರೆ. ಈಗಿರುವ ರಾಮನ ಮೂರ್ತಿ ಜಾಗ ರಾಮ ಮಂದಿರನೇ ಎಂದು ಹಿಂದಿನ ಹೈಕೋರ್ಟ್ ಹೇಳಿದೆ. ಈಗ ಅದನ್ನ ಬದಲು ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.

ಬಿಹಾರ ಪ್ರವಾಹದ ಬಗ್ಗೆ ಪ್ರಧಾನಿ ಟ್ವೀಟ್ ಮಾಡುತ್ತಾರೆ. ಆದರೆ ಕರ್ನಾಟಕದ ನೆರೆ ಬಗ್ಗೆ ಟ್ವೀಟ್​ ಮಾಡಿಲ್ಲ ಎಂದು ಟೀಕಿಸುತ್ತಿದ್ದಾರೆ. ಪ್ರಧಾನಿಗಳು ಇಲ್ಲಿಗೆ ಬಂದೇ ಪರಿಹಾರ ಕೊಡಬೇಕಾ? ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿ ವರದಿ ಮಾಡಿದ್ದಾರೆ. ಪ್ರಧಾನಿ ಮೋದಿ ವಿಶ್ವನಾಯಕ. ಪ್ರತಿ ಬಾರಿ ಇಲ್ಲಿಗೆ ಬರಬೇಕು ಎನ್ನುವುದು ಸರಿಯಲ್ಲ ಎಂದರು.

ಪ್ರಧಾನಿ ಮೋದಿ ಒಬ್ಬ ಒಳ್ಳೆಯ ಮನುಷ್ಯ. ಕೇಂದ್ರ ಸರ್ಕಾರದ ಪರಿಹಾರ ಹಂತಹಂತವಾಗಿ ಬರಲಿದೆ. ದೇಶದ 5 ರಾಜ್ಯಗಳಲ್ಲಿ ಪ್ರವಾಹ ಉಂಟಾಗಿರುವುದರಿಂದ ಸ್ವಲ್ಪ ತಡ ಆಗಲಿದೆ. ಕೇಂದ್ರ ಸರ್ಕಾರ ಜನಪರವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ದೇಶದ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಕೆಲಸಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

58 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

24 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

24 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago