Featured

ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ – vishwanews24

ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು

  • ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರ.
  • ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.
  • ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆ‌ದಾರರಿಂದ ಸಂಗ್ರಹಿಸುವ ದಂಡವನ್ನ‌ 30% ಹೆಚ್ಚಳಕ್ಕೆ‌ ನಿರ್ಧಾರ.
  • ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ.
  • ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ.
  • ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ.
  • ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ.

 

ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ(ವ್ಯಕ್ತಿಗೆ 170 ರೂ ಹಣವನ್ನ ನೀಡಲಿರೋ ಸರ್ಕಾರ).

  • ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ.
  • ಕಂದಾಯ ಇಲಾಖೆಯ ಸಹಾಯಕ ಉಪನೋಂದಣ ಅಧಿಕಾರಿ ವರ್ಗಾವಣೆ ಅವಧಿಯನ್ನು 30-09-24ರ ವರೆಗೂ ವಿಸ್ತರಣೆಗೆ ಅನುಮೋದನೆ.
  • ಸ್ವಸಹಾಯ ಗುಂಪಿನ ಮಹಿಳೆಯರಿಗೆ ಹೊಸ ಉದ್ಯೋಗ ಅವಕಾಶ ಒಂದು ಲಕ್ಷ ಮಹಿಳೆಯರಿಗೆ 2500 ಕಾಫಿ ಕಿಯೋಸ್ಕ್‌ಗಳನ್ನ ಒದಗಿಸಲು ಕ್ರಮ 25 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ.
  • ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ನೂತನ ವಾಹನ ಪಿಟ್ನಸ್ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ.
  • 341 ಕೋಟಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಸ್ಥಾಪನೆ.. ಯೋಜನೆಗೆ ಘಟನೋತ್ತರ ಅನುಮೋದನೆ.
  • ಸ್ಕ್ರಾಪಿಂಗ್ ವಾಹನಗಳ ಮೇಲಿನ ದಂಡ ವಿನಾಯತಿ ದಿನಾಂಕ ವಿಸ್ತಾರಣೆ ಅನುಮೋದನೆ – 31-03-26ರ ವರೆಗೆ.
  • ಪಿಪಿಪಿ ಮಾದರಿಯಲ್ಲಿ ಟೆಕ್ಸ್​​ಟೈಲ್ಸ್​ ಪಾರ್ಕ್​ ಮಾಡಲು ಅನುಮೋದನೆ.
  • ಉಡುಪಿಯ ಕಾರ್ಕಳದಲ್ಲಿ ಪಿಪಿಪಿ‌ ಮಾದರಿಯಲ್ಲಿ ಟೆಕ್ಸ್‌ಟೈಲ್ಸ್ ಪಾರ್ಕ್ ಮಾಡಲು ಅನುಮೋದನೆ.
  • ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ 100 ಕೋಟಿ ವೆಚ್ಚದಲ್ಲಿ ಟ್ರೈನಿಂಗ್ ನೀಡಲು ಅನುಮೋದನೆ.
  • ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ನೀಡಲು ಅನುಮೋದನೆ.
  • ಆಹಾರ ಇಲಾಖೆ ಇಂದ ಪಡಿತರ ಫಲಾನುಭವಿಗಳಿಗೆ ಹಣದ ಬದಲು, ಆಹಾರ ನೀಡುವ ಚಿಂತನೆ ಇತ್ತು.. DBT ಮೂಲಕ ಹಣವನ್ನ ಮುಂದುವರೆಸಲು ನಿರ್ಧಾರ
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago