Featured

ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ – vishwanews24

ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು

  • ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರ.
  • ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.
  • ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆ‌ದಾರರಿಂದ ಸಂಗ್ರಹಿಸುವ ದಂಡವನ್ನ‌ 30% ಹೆಚ್ಚಳಕ್ಕೆ‌ ನಿರ್ಧಾರ.
  • ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ.
  • ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ.
  • ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ.
  • ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ.

 

ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ(ವ್ಯಕ್ತಿಗೆ 170 ರೂ ಹಣವನ್ನ ನೀಡಲಿರೋ ಸರ್ಕಾರ).

  • ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ.
  • ಕಂದಾಯ ಇಲಾಖೆಯ ಸಹಾಯಕ ಉಪನೋಂದಣ ಅಧಿಕಾರಿ ವರ್ಗಾವಣೆ ಅವಧಿಯನ್ನು 30-09-24ರ ವರೆಗೂ ವಿಸ್ತರಣೆಗೆ ಅನುಮೋದನೆ.
  • ಸ್ವಸಹಾಯ ಗುಂಪಿನ ಮಹಿಳೆಯರಿಗೆ ಹೊಸ ಉದ್ಯೋಗ ಅವಕಾಶ ಒಂದು ಲಕ್ಷ ಮಹಿಳೆಯರಿಗೆ 2500 ಕಾಫಿ ಕಿಯೋಸ್ಕ್‌ಗಳನ್ನ ಒದಗಿಸಲು ಕ್ರಮ 25 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ.
  • ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ನೂತನ ವಾಹನ ಪಿಟ್ನಸ್ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ.
  • 341 ಕೋಟಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ ಸ್ಥಾಪನೆ.. ಯೋಜನೆಗೆ ಘಟನೋತ್ತರ ಅನುಮೋದನೆ.
  • ಸ್ಕ್ರಾಪಿಂಗ್ ವಾಹನಗಳ ಮೇಲಿನ ದಂಡ ವಿನಾಯತಿ ದಿನಾಂಕ ವಿಸ್ತಾರಣೆ ಅನುಮೋದನೆ – 31-03-26ರ ವರೆಗೆ.
  • ಪಿಪಿಪಿ ಮಾದರಿಯಲ್ಲಿ ಟೆಕ್ಸ್​​ಟೈಲ್ಸ್​ ಪಾರ್ಕ್​ ಮಾಡಲು ಅನುಮೋದನೆ.
  • ಉಡುಪಿಯ ಕಾರ್ಕಳದಲ್ಲಿ ಪಿಪಿಪಿ‌ ಮಾದರಿಯಲ್ಲಿ ಟೆಕ್ಸ್‌ಟೈಲ್ಸ್ ಪಾರ್ಕ್ ಮಾಡಲು ಅನುಮೋದನೆ.
  • ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ 100 ಕೋಟಿ ವೆಚ್ಚದಲ್ಲಿ ಟ್ರೈನಿಂಗ್ ನೀಡಲು ಅನುಮೋದನೆ.
  • ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ನೀಡಲು ಅನುಮೋದನೆ.
  • ಆಹಾರ ಇಲಾಖೆ ಇಂದ ಪಡಿತರ ಫಲಾನುಭವಿಗಳಿಗೆ ಹಣದ ಬದಲು, ಆಹಾರ ನೀಡುವ ಚಿಂತನೆ ಇತ್ತು.. DBT ಮೂಲಕ ಹಣವನ್ನ ಮುಂದುವರೆಸಲು ನಿರ್ಧಾರ
Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago