ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ಖಾತೆಗೆ ಜಮೆ ಮಾಡಲು ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಹಾಗಾಗಿ ನಾಳೆಯಿಂದಲೇ ಹಣ ಜಮೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೊದಲಿಗೆ ಸಮಗ್ರವಾಗಿ ದಾಖಲೆಗಳನ್ನು ಸಂಗ್ರಹಿಸಬೇಕಿದ್ದು, ನಮ್ಮಲ್ಲಿ ಒಟ್ಟು 1.78 ಕೋಟಿ ರೇಷನ್ ಕಾರ್ಡ್ಗಳಿವೆ. ಅವುಗಳಲ್ಲಿ 1.28 ಕೋಟಿ ಬಿಪಿಎಲ್ ಕಾರ್ಡ್ದಾರರು ಇದ್ದಾರೆ. ಈ ಪೈಕಿ 1.22 ಕೋಟಿ ಕಾರ್ಡ್ಗಳಲ್ಲಿ ಕನಿಷ್ಠ ಕುಟುಂಬದ ಒಬ್ಬರಾದರೂ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇನ್ನುಳಿದ 6 ಲಕ್ಷ ಕಾರ್ಡ್ಗಳಲ್ಲಿ ಸಮಸ್ಯೆಯಾಗಿದೆ ಎಂದರು.
ಇನ್ನು ಕೆಲವರು ಬ್ಯಾಂಕ್ ಖಾತೆ ಹೊಂದಿದ್ದರೆ, ಆಧಾರ್ ಲಿಂಕ್ ಆಗಿಲ್ಲ. ಆಧಾರ್ ಲಿಂಕ್ ಆಗಿದ್ದರೆ ಬ್ಯಾಂಕ್ ಖಾತೆ ಆಕ್ಟೀವ್ ಆಗಿಲ್ಲ. ಈ ರೀತಿಯ ಸಮಸ್ಯೆಗಳು ಕಂಡುಬಂದಿರುವುದರಿಂದ ಜೂನ್ 1ರಿಂದ ಎಲ್ಲರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡೋದು ಕಷ್ಟ ಎಂದಿದ್ದಾರೆ.
ಶೇ.94.6 ಪಡಿತರ ಚೀಟಿಯಲ್ಲಿ ಮಹಿಳೆಯರೇ ಕುಟುಂಬದ ಮುಖ್ಯಸ್ಥರಿದ್ದು, ಶೇ.5 ರಷ್ಟು ಪುರುಷರಿದ್ದಾರೆ. ಒಂದು ವೇಳೆ ಕುಟುಂಬದ ಮುಖ್ಯಸ್ಥರು ಬ್ಯಾಂಕ್ ಖಾತೆ ಹೊಂದಿಲ್ಲವಾದಲ್ಲಿ, ಕುಟುಂಬದ ಇತರ ಸದಸ್ಯರ ಖಾತೆಗೆ ಹಣ ಜಮೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…