ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.
ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ. ಫೆಬ್ರುವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ ಎಂದರು.
ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆ. ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಮೂರು ತಿಂಗಳು ಹಣ ಹಾಕಿಲ್ಲ. ಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…