Featured

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ : ಕೆ.ಹೆಚ್​ ಮುನಿಯಪ್ಪ – vishwanews24

ಅನ್ನಭಾಗ್ಯ ಯೋಜನೆ : ಫೆಬ್ರವರಿಯಿಂದ ಹಣದ ಬದಲು 10 ಕೆಜಿ ಅಕ್ಕಿ : ಕೆ.ಹೆಚ್​ ಮುನಿಯಪ್ಪ

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ. ಫೆಬ್ರುವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ ಎಂದರು.

ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆ. ದರ ಪರಿಷ್ಕರಣೆ‌ ಹಿನ್ನೆಲೆಯಲ್ಲಿ ‌ಮೂರು ತಿಂಗಳು ಹಣ ಹಾಕಿಲ್ಲ. ಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

8 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago