ಲಖನೌ: “ಅನ್ಯ ಧರ್ಮಗಳಿಗೆ ಹಿಂದೂ ಧರ್ಮದಿಂದ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಚಾಲಕ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಚಿತ್ರಕೂಟದಲ್ಲಿ ನಡೆಯುತ್ತಿರುವ ಹಿಂದೂ ಮಹಾಕುಂಭದಲ್ಲಿ ಮಾತನಾಡಿದ ಅವರು, “ಮತಾಂತರ ಆಗಿರುವವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರಲು ಎಲ್ಲರೂ ಪ್ರತಿಜ್ಞೆ ಮಾಡಬೇಕಿದೆ. ಜೊತೆಗೆ ಹಿಂದೂಗಳು ಮತಾಂತರ ಆಗದಂತೆಯೂ ನೋಡಿಕೊಳ್ಳಬೇಕಿದೆ. ನಾವೆಲ್ಲರೂ ಹಿಂದೂ ಸಹೋದರಿಯರ ಘನತೆಯನ್ನು ಕಾಪಾಡುವ ಪ್ರತಿಜ್ಞೆ ಮಾಡಬೇಕಿದೆ” ಎಂದಿದ್ದಾರೆ.
“ಮಹಾಕುಂಭದಲ್ಲಿ ಭಾಗವಹಿಸಿರುವ ಸ್ವಾಮೀಜಿಗಳು ಹಾಗೂ ದಾರ್ಶನಿಕರು ಲವ್ ಜಿಹಾದ್, ಮತಾಂತರಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದ ಅವರು, ಹಿಂದೂ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ರಕ್ಷಿಸಬೇಕು” ಎಂದು ಹೇಳಿದ್ದಾರೆ.
“ಹಿಂದೂಗಳಲ್ಲಿ ಏಕತೆ ತರಬೇಕಾದ ಅವಶ್ಯಕತೆ ಇದ್ದು, ಜಾತೀಯತೆ ಹಾಗೂ ಇತರ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಬೇಕಿದೆ” ಎಂದಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…