ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.
ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…