ಉಡುಪಿ : ಅಪಘಾತದಲ್ಲಿ ಗಾಯಗೊಂಡು ವ್ಯಕ್ತಿ ನರಳುತ್ತಿದ್ದರೂ ಕೂಡ ಜನರು ಸಹಾಯಕ್ಕೆ ಬಾರದೇ ಅಮಾನವೀಯತೆಯಿಂದ ವರ್ತಿಸಿದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡು ಗಾಯಾಳು ಆಸ್ಪತ್ರೆಗೆ ಸೇರಿಸುವಂತೆ ಗೋಗರೆದರೂ ಒಬ್ಬರು ಕೂಡ ಸಹಾಯಕ್ಕೆ ಬರದೇ ಮೂಕ ಪ್ರೇಕ್ಷಕರಾಗಿ ನಿಂತು ನೋಡಿದ ಘಟನೆ ನಡೆದಿದೆ.
ಆದರೆ ತೀವ್ರ ರಕ್ತಸ್ರಾವವಾಗಿ ಯುವಕ ಸುಶಿಕ್ಷಿತ್ (20) ಮೃತಪಟ್ಟಿದ್ದಾನೆ. ತನ್ನ ಗೆಳೆಯರ ಜೊತೆ ಕ್ಯಾಟರಿಂಗ್ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಸಹಾಯ ಮಾಡುವಂತೆ ಆಸ್ಪತ್ರೆ ಧಾವಿಸುವಂತೆ ಅಂಗಲಾಚಿದರೂ ಕೂಡ ಯಾರೂ ನೆರವಿಗೆ ಧಾವಿಸಲಿಲ್ಲ.
ರಿಕ್ಷಾ ಆದರೂ ಕರೆತನ್ನಿ ಎಂದು ಗಾಯಾಳು ಪರಿ ಪರಿಯಾಗಿ ಬೇಡಿದರೂ ಕೂಡ ಒಬ್ಬರು ಕೂಡ ಸಹಾಯಕ್ಕೆ ಬರಲಿಲ್ಲ, ಕೊನೆಗೆ ಆತನ ಗೆಳೆಯರು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ . ಆದರೆ ಆಸ್ಪತ್ರೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ. ಗೆಳೆಯರ ಆಕ್ರಂದನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…