ಗೆಳೆಯರ ಆಕ್ರಂದನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್..
ಉಡುಪಿ : ಅಪಘಾತದಲ್ಲಿ ಗಾಯಗೊಂಡು ವ್ಯಕ್ತಿ ನರಳುತ್ತಿದ್ದರೂ ಕೂಡ ಜನರು ಸಹಾಯಕ್ಕೆ ಬಾರದೇ ಅಮಾನವೀಯತೆಯಿಂದ ವರ್ತಿಸಿದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡು ಗಾಯಾಳು ಆಸ್ಪತ್ರೆಗೆ ಸೇರಿಸುವಂತೆ ಗೋಗರೆದರೂ ಒಬ್ಬರು ಕೂಡ ಸಹಾಯಕ್ಕೆ ಬರದೇ ಮೂಕ ಪ್ರೇಕ್ಷಕರಾಗಿ ನಿಂತು ನೋಡಿದ ಘಟನೆ ನಡೆದಿದೆ.
ಆದರೆ ತೀವ್ರ ರಕ್ತಸ್ರಾವವಾಗಿ ಯುವಕ ಸುಶಿಕ್ಷಿತ್ (20) ಮೃತಪಟ್ಟಿದ್ದಾನೆ. ತನ್ನ ಗೆಳೆಯರ ಜೊತೆ ಕ್ಯಾಟರಿಂಗ್ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಸಹಾಯ ಮಾಡುವಂತೆ ಆಸ್ಪತ್ರೆ ಧಾವಿಸುವಂತೆ ಅಂಗಲಾಚಿದರೂ ಕೂಡ ಯಾರೂ ನೆರವಿಗೆ ಧಾವಿಸಲಿಲ್ಲ.
ರಿಕ್ಷಾ ಆದರೂ ಕರೆತನ್ನಿ ಎಂದು ಗಾಯಾಳು ಪರಿ ಪರಿಯಾಗಿ ಬೇಡಿದರೂ ಕೂಡ ಒಬ್ಬರು ಕೂಡ ಸಹಾಯಕ್ಕೆ ಬರಲಿಲ್ಲ, ಕೊನೆಗೆ ಆತನ ಗೆಳೆಯರು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ . ಆದರೆ ಆಸ್ಪತ್ರೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ. ಗೆಳೆಯರ ಆಕ್ರಂದನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…