ಚೆನ್ನೈ: ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಪ್ರಾಣಬಿಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಪಾಪತಿ(45) ಮೃತ ಮಹಿಳೆ.
ಕಳೆದ 15 ವರ್ಷದಿಂದ ಗಂಡನಿಂದ ದೂರವಾಗಿ ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ ಪಾಪತಿ ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕಳೆದ ಕೆಲ ಸಮಯದಿಂದ ಸ್ವಚ್ಛತೆಯ ಕೆಲಸವನ್ನು ಮಾಡುತ್ತಿದ್ದರು.
ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು. ಈ ವೇಳೆ ಯಾರೋ ಒಬ್ಬರು ಪಾಪತಿಯ ಬಳಿ “ನೀನು ಅಪಘಾತದಲ್ಲಿ ಸತ್ತರೆ ನಿನ್ನ ಮಗನ ಕಾಲೇಜು ಶುಲ್ಕದೊಂದಿಗೆ, ಆತನ ಭವಿಷ್ಯವನ್ನು ಸರ್ಕಾರ ನೋಡಿಕೊಳ್ಳುತ್ತದೆ” ಎಂದಿದ್ದರು. ಮೊದಲೇ ಖಿನ್ನತೆಗೆ ಒಳಗಾಗಿದ್ದ ಪಾಪತಿ ಈ ಮಾತನ್ನು ನಿಜವೆಂದು ನಂಬಿ ಚಲಿಸುತ್ತಿರುವ ಬಸ್ಸಿನ ಮುಂದೆ ಹೋಗಿ ನಿಂತಿದ್ದಾರೆ. ವೇಗವಾಗಿ ಬರುತ್ತಿದ್ದ ಬಸ್ ಪಾಪತಿ ಅವರ ಮೇಲೆ ಹರಿದಿದೆ.
ಜೂ.28 ರಂದು ಘಟನೆ ನಡೆದಿದ್ದು, ಸಾವಿನ ಹಿಂದಿನ ಕಾರಣ ತಡವಾಗಿ ಬೆಳಕಿಗೆ ಬಂದಿದೆ. ಬಸ್ಸಿನ ಮುಂದೆ ಹಾರುವ ಮುನ್ನ ಅದೇ ದಿನ ಪಾಪತಿ ಮತ್ತೊಂದು ಬಸ್ಸಿನ ಮುಂದೆ ಹಾರಲು ಯತ್ನಿಸಿದ್ದರು. ಆದರೆ ಆ ವೇಳೆ ದ್ವಿಚಕ್ರ ವಾಹನ ಅವರಿಗೆ ಢಿಕ್ಕಿ ಹೊಡೆದಿತ್ತು ಎಂದು ವರದಿ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…