Featured

ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ – vishwanews24

ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು  ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ  ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್​ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಜನಪ್ರಿಯ ‘ತ್ರಿನಯನಿ’ ಧಾರಾವಾಹಿಯಲ್ಲಿ ಚಂದು ಹಾಗೂ ಪವಿತ್ರಾ ಜಯರಾಮ್​ ಅವರು ಒಟ್ಟಿಗೆ ನಟಿಸುತ್ತಿದ್ದರು. ಪವಿತ್ರಾ ನಿಧನದ ಬಳಿಕ ಈ ಧಾರಾವಾಹಿ ತಂಡದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿತ್ತು. ಈಗ ಚಂದು ಕೂಡ ನಿಧನರಾಗಿರುವುದರಿಂದ ಎಲ್ಲರಿಗೂ ಆಘಾತ ಆಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago