ಅಮರಾವತಿ: ಅಪರಿಚಿತ ನಂಬರ್ನಿಂದ ಬಂದ ವಾಟ್ಸಾಪ್ ಮೆಸೇಜ್ನಿಂದ ಶಿಕ್ಷಿಯೊಬ್ಬರು 21 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈಲ್ಲಿನ ಅನ್ನಮಯ್ಯ ಜಿಲ್ಲೆಯ ನಿವಾಸಿಯಾಗಿರುವ ಶಿಕ್ಷಕಿ ವರಲಕ್ಷಿ ಅವರೇ 21 ಲಕ್ಷ ಕಳೆದುಕೊಂಡಿರುವವರು. ತನ್ನ ಮೊಬೈಲ್ಗೆ ಬಂದ ಒಂದೇ ಒಂದು ವಾಟ್ಸಾಪ್ ಲಿಂಕ್ ಸಂದೇಶದಿಂದ ಹಣ ಕಳೆದುಕೊಂಡು ಬಳಿಕ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಹಣ ಕಳೆದುಕೊಂಡಿದ್ದು ಹೇಗೆ?
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ತನ್ನ ವಾಟ್ಸಾಪ್ಗೆ ಲಿಂಕ್ನೊಂದಿಗೆ ಮೆಸೇಜ್ ಬಂದಿದೆ. ಹಲವು ಬಾರಿ ಸಂದೇಶಗಳನ್ನು ಸ್ವೀಕರಿಸಿದ್ದಾರೆ, ಅಂದಿನಿಂದಲೇ ಆಕೆಯ ಫೋನ್ ಹ್ಯಾಕ್ ಆಗಿದೆ. ವರಲಕ್ಷ್ಮೀ ಅವರು ಲಿಂಕ್ ಕ್ಲಿಕ್ ಮಾಡಿದ ಬಳಿಕ ಫೋನ್ ಸಂಪೂರ್ಣ ಹ್ಯಾಕ್ ಆಗಿದ್ದು, ಸೈಬರ್ ಕಿರಾತಕರು ಈಕೆಯ ಖಾತೆಯಿಂದಲೇ ವಹಿವಾಟು ನಡೆಸಿದ್ದಾರೆ. 20,000, 40,000 ಮತ್ತು 80,000 ದಂತೆ ಖಾತೆಯಿಂದ ಹಣ ಕಡಿಗೊಳ್ಳುತ್ತಾ ಹೋಗಿದೆ. ಹೀಗೆ ಒಟ್ಟು 21 ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾರೆ. ಅಲ್ಲದೇ ಮದನಪಲ್ಲಿಯ ಉದ್ಯೋಗಿ ಜ್ಞಾನ ಪ್ರಕಾಶ್ ಅವರಿಂದಲೂ 12 ಲಕ್ಷ ರೂಪಾಯಿ ಸೈಬರ್ ಕಳ್ಳರ ಪಾಲಾಗಿದೆ.
ಈ ಸಂಬಂಧ ವರಲಕ್ಷ್ಮೀ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…