ಅಮರಾವತಿ: ಅಪರಿಚಿತ ನಂಬರ್ನಿಂದ ಬಂದ ವಾಟ್ಸಾಪ್ ಮೆಸೇಜ್ನಿಂದ ಶಿಕ್ಷಿಯೊಬ್ಬರು 21 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈಲ್ಲಿನ ಅನ್ನಮಯ್ಯ ಜಿಲ್ಲೆಯ ನಿವಾಸಿಯಾಗಿರುವ ಶಿಕ್ಷಕಿ ವರಲಕ್ಷಿ ಅವರೇ 21 ಲಕ್ಷ ಕಳೆದುಕೊಂಡಿರುವವರು. ತನ್ನ ಮೊಬೈಲ್ಗೆ ಬಂದ ಒಂದೇ ಒಂದು ವಾಟ್ಸಾಪ್ ಲಿಂಕ್ ಸಂದೇಶದಿಂದ ಹಣ ಕಳೆದುಕೊಂಡು ಬಳಿಕ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಹಣ ಕಳೆದುಕೊಂಡಿದ್ದು ಹೇಗೆ?
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ತನ್ನ ವಾಟ್ಸಾಪ್ಗೆ ಲಿಂಕ್ನೊಂದಿಗೆ ಮೆಸೇಜ್ ಬಂದಿದೆ. ಹಲವು ಬಾರಿ ಸಂದೇಶಗಳನ್ನು ಸ್ವೀಕರಿಸಿದ್ದಾರೆ, ಅಂದಿನಿಂದಲೇ ಆಕೆಯ ಫೋನ್ ಹ್ಯಾಕ್ ಆಗಿದೆ. ವರಲಕ್ಷ್ಮೀ ಅವರು ಲಿಂಕ್ ಕ್ಲಿಕ್ ಮಾಡಿದ ಬಳಿಕ ಫೋನ್ ಸಂಪೂರ್ಣ ಹ್ಯಾಕ್ ಆಗಿದ್ದು, ಸೈಬರ್ ಕಿರಾತಕರು ಈಕೆಯ ಖಾತೆಯಿಂದಲೇ ವಹಿವಾಟು ನಡೆಸಿದ್ದಾರೆ. 20,000, 40,000 ಮತ್ತು 80,000 ದಂತೆ ಖಾತೆಯಿಂದ ಹಣ ಕಡಿಗೊಳ್ಳುತ್ತಾ ಹೋಗಿದೆ. ಹೀಗೆ ಒಟ್ಟು 21 ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾರೆ. ಅಲ್ಲದೇ ಮದನಪಲ್ಲಿಯ ಉದ್ಯೋಗಿ ಜ್ಞಾನ ಪ್ರಕಾಶ್ ಅವರಿಂದಲೂ 12 ಲಕ್ಷ ರೂಪಾಯಿ ಸೈಬರ್ ಕಳ್ಳರ ಪಾಲಾಗಿದೆ.
ಈ ಸಂಬಂಧ ವರಲಕ್ಷ್ಮೀ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…