ರಾಮನಗರ: ಅಸ್ಸಾಂನಲ್ಲಿ ಅಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ, ಅಲ್ಲಿನ 10 ಮಂದಿ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿ ಸಮೀಪದ ವಂಡರ್ ಲಾ ಹಾಗೂ ಈಗಲ್ ಟನ್ ರೆಸಾರ್ಟ್ಗಳಿಗೆ ಕರೆತರಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಶಾಸಕರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.
ಅಸ್ಸಾಂ ಶಾಸಕರ ಗುರುವಾರ ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ, ಕಾಂಗ್ರೆಸ್ ಮುಖಂಡರು ಶಾಸಕರನ್ನು 8 ಇನ್ನೋವಾ ಕಾರುಗಳಲ್ಲಿ ವಂಡರ್ ಲಾ ಹಾಗೂ ಈಗಲ್ ಟನ್ ರೆಸಾರ್ಟ್ಗೆ ಕರೆ ತಂದಿದ್ದಾರೆ. ರೆಸಾರ್ಟ್ಗೆ ಬಂದ ಶಾಸಕರನ್ನು ಹೂ ಹಾರ ಹಾಕಿ ಸ್ವಾಗತಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರು ವಿಶ್ರಾಂತಿ ಪಡೆಯಲು ಅವರಿಗೆ ಮೊದಲೇ ಕಾಯ್ದಿರಿಸಿದ ಕೊಠಡಿಗಳಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:👇
ರೆಸಾರ್ಟ್ ಸುತ್ತ ಸ್ಥಳೀಯ ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಡಿ.ಕೆ.ಶಿವಕುಮಾರ್ ಆಪ್ತ ಕಾಂಗ್ರೆಸ್ ಮುಖಂಡರಿಗೆ ಮಾತ್ರ ರೆಸಾರ್ಟ್ಗೆ ಪ್ರವೇಶವಿದ್ದು, ಬೇರೆ ಯಾರೂ ಸುಳಿಯದಂತೆ ಎಚ್ಚರಿಕೆ ವಹಿಸಲಾಗಿದೆ.*
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…