ನವದೆಹಲಿ: ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.
ದೇಶದ ಬಡಜನತೆ ಭಯ ಹಾಗೂ ಹತಾಶೆಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಈ ಕುರಿತಂತೆ ಕಾಂಗ್ರೆಸ್ ಎಚ್ಚರ ವಹಿಸಬೇಕಿದೆ ಎಂದ ಸೋನಿಯಾ, ಅಧಿಕಾರಕ್ಕಾಗಿ ಸಮಾಜದಲ್ಲಿ ದ್ವೇಷ ಬಿತ್ತುತ್ತಿರುವ ಬಿಜೆಪಿಯನ್ನು ಸೋಲಿಸುವ ಜವಾಬ್ದಾರಿಯನ್ನು ಪಕ್ಷ ಹೊರಬೇಕು ಎಂದು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಅವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ ಪ್ರಾರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೆ ಅದು ತನ್ನ ಹತಾಶ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ನಾವು ರಾಹುಲ್ ಅವರೊಂದಿಗೆ ಕೈಜೋಡಿಸುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]