Featured

ಅಪಾಯಕಾರಿ ಶ್ವಾನ ತಳಿಗಳ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್​ ಮಧ್ಯಂತರ ತಡೆ – Vishwanews24

ಅಪಾಯಕಾರಿ ಶ್ವಾನ ತಳಿಗಳ ಮೇಲಿನ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್​ ಮಧ್ಯಂತರ ತಡೆ

ಬೆಂಗಳೂರು: ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಮತ್ತು ಕ್ರೂರವಾಗಿರುವ ತಳಿಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕಕ್ಕೆ ಸೀಮಿತವಾಗಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ‌.

ಬೆಂಗಳೂರು ವಾಸಿ ಕಿಂಗ್​​ ಸೋಲ್ಮನ್​ ಡೇವಿಡ್​​ ಮತ್ತು ಮರ್ಡೋನಾ ಜಾನ್​ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದೆ. ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಮನುಷ್ಯನ ಜೀವಕ್ಕೆ ಅಪಾಯಕಾರಿ ಮತ್ತು ಉಗ್ರವಾಗಿ ವರ್ತಿಸುವ ತಳಿಯ ಶ್ವಾನಗಳನ್ನು ಗುರುತಿಸುವುದಕ್ಕೆ ಆಳವಾದ ಅಧ್ಯಯನದ ಅಗತ್ಯವಿದೆ. ಆದರೆ, ಸುತ್ತೋಲೆಯಲ್ಲಿ ಉಲ್ಲೇಖಿಸದ ಹಲವು ತಳಿಗಳು ಕ್ರೂರ ವರ್ಗಕ್ಕೆ ಸೇರಲಿವೆ ಎಂದು ಕೋರ್ಟ್ ಗಮನಕ್ಕೆ ತಂದರು.

 

ಈ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸೇಟರ್ ಜನರಲ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ವೇಳೆ ದಿಲ್ಲಿ ನ್ಯಾಯಾಲಯ ಈ ಸಂಬಂಧ ನಿರ್ದೇಶನ ನೀಡಿದೆ. ಅಲ್ಲದೆ, ಕೇಂದ್ರ ಸರಕಾರ ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಬೇಕು. ಅರ್ಜಿದಾರರ ಮನವಿಯನ್ನು ಪರಿಗಣಿಸಿ ಆದೇಶದ ಪ್ರತಿ ಲಭ್ಯವಾದ ಮೂರು ತಿಂಗಳೊಳಗೆ ಈ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ

ಕ್ರೂರ ಹಾಗೂ ಅಪಾಯಕಾರಿ ಶ್ವಾನಗಳ ತಳಿಗಳ (ಅಮೆರಿಕನ್ ಸ್ಟಾಫರ್ಡ್ ಶೈರ್, ಟೆರಿಯರ್, ಡೋಗೋ ಅರ್ಜೆಂಟೇನೋ, ಬುಲ್ ಡಾಗ್, ಕಂಗಲ್, ಸೆಂಟ್ರಲ್ ಏಷ್ಯನ್ ಷಫರ್ಡ್ ಡಾಗ್ ಸೇರಿದಂತೆ ಮಿಶ್ರ ತಳಿಯ ಶ್ವಾನಗಳ) ಸಂತಾನೋತ್ಪತ್ತಿ ನಿಷೇಧಿಸುವ ಸಲುವಾಗಿ ಅವುಗಳ ಮಾಲೀಕರು ಸಂತಾನಹರಣಕ್ಕಾಗಿ ಅಗತ್ಯವಿರವ ಕ್ರಿಮಿನಾಶಕಗಳನ್ನು ಬಳಕೆ ಮಾಡಬೇಕು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ 2024ರ ಮಾರ್ಚ್ 12ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

 

ವಾದ ಆಲಿಸಿದ ಹೈಕೋರ್ಟ್, ಕೇಂದ್ರದ ಪರ ವಕೀಲರು ಕೇಂದ್ರ ಸರಕಾರ ಸುತ್ತೋಲೆ ಹೊರಡಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಪರಿಗಣಿಸಿರುವ ಎಲ್ಲ ಅಂಶಗಳಿರುವ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲಿಯವರೆಗೂ ಕರ್ನಾಟಕ ರಾಜ್ಯಕ್ಕೆ ಸೀಮಿತವಾಗುವಂತೆ ಸುತ್ತೋಲೆಗೆ ತಡೆ ನೀಡುತ್ತಿರುವುದಾಗಿ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago