ಬೆಂಗಳೂರು : ಮಾನವ ಜೀವಕ್ಕೆ ಅಪಾಯಕಾರಿಯಾಗಿರುವ 23ಕ್ಕೂ ಅಧಿಕ ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರ ಹೊರಡಿಸಿದ ಆದೇಶವನ್ನು ಬುಧವಾರ ರದ್ದುಗೊಳಿಸಿದೆ.
ಕೆಲ ಶ್ವಾನ ತಳಿ ನಿಷೇಧಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲವರು ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಂದ್ರದ ನಿಷೇಧ ಆದೇಶವನ್ನು ರದ್ದುಗೊಳಿಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು. ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯ ಜೊತೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದೆ.
ಇನ್ನು ಕೇಂದ್ರವು ಶ್ವಾನ ತಳಿ ನಿಷೇಧಿಸುವ ಆದೇಶ ನೀಡುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟ ಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ಪೀಠ ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…