ಬೆಂಗಳೂರು : ಮಾನವ ಜೀವಕ್ಕೆ ಅಪಾಯಕಾರಿಯಾಗಿರುವ 23ಕ್ಕೂ ಅಧಿಕ ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರ ಹೊರಡಿಸಿದ ಆದೇಶವನ್ನು ಬುಧವಾರ ರದ್ದುಗೊಳಿಸಿದೆ.
ಕೆಲ ಶ್ವಾನ ತಳಿ ನಿಷೇಧಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲವರು ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಂದ್ರದ ನಿಷೇಧ ಆದೇಶವನ್ನು ರದ್ದುಗೊಳಿಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು. ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯ ಜೊತೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದೆ.
ಇನ್ನು ಕೇಂದ್ರವು ಶ್ವಾನ ತಳಿ ನಿಷೇಧಿಸುವ ಆದೇಶ ನೀಡುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟ ಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ಪೀಠ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…