ಬೆಂಗಳೂರು: ಪಾರ್ವತಮ್ಮ ರಾಜ್ಕುಮಾರ್ ಹುಟ್ಟುಹಬ್ಬದಂದೆ ದಿ. ನಟ ಪುನೀತ್ ರಾಜ್ಕುಮಾರ್ ಅವರ ಕನಸಿನ ಗಂಧದಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ರಿಲೀಸ್ ಆಗಿದೆ.
ನ.1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅದರ ಟೈಟಲ್ ಟೀಸರ್ ಲಾಂಚ್ ಮಾಡಬೇಕು ಎಂಬುದು ಅವರ ಪುನೀತ್ ಅವರ ಕನಸಾಗಿತ್ತು. ಆದರೆ ಅದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಇಂದು (ಡಿ.6) ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್ ಅನಾವರಣ ಮಾಡಲಾಗಿದೆ.
ಗಂಧದ ಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದ ಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್ಕುಮಾರ್ ಹಾಗೂ ಶಿವರಾಜ್ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.
PRK ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಪ್ರಸಿದ್ಧ ಅರಣ್ಯಗಳನ್ನೆಲ್ಲಾ ಅಪ್ಪು ಸುತ್ತಿದ್ರು. ಕರ್ನಾಟಕದ ಸೌಂದರ್ಯವನ್ನು ಈ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿದೆ. ಹೀಗಾಗಿ ಇದಕ್ಕೆ ಗಂಧದ ಗುಡಿ ಎಂದು ಹೆಸರಿಡಲಾಗಿದೆ. 1 ನಿಮಿಷ 20 ಸೆಕೆಂಡ್ ಇರುವ ಈ ಟೀಸರ್ ರೋಮಾಂಚನಕಾರಿಯಾಗಿದೆ. 5 ದಶಕಗಳ ನಂತರ ಮತ್ತೆ ಗಂಧದಗುಡಿ ಅಭಿಮಾನಿಗಳ ಎದುರು ಬರಲಿದೆ ಎನ್ನುವುದು ಸಂತೋಷದ ವಿಚಾರವಾಗಿದೆ.
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…