Featured

ಅಪ್ಪು ಡ್ರೀಮ್ ಪ್ರೊಜೆಕ್ಟ್  : ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೀಸರ್ ಬಿಡುಗಡೆ – Vishwanews24

ಅಪ್ಪು ಡ್ರೀಮ್ ಪ್ರೊಜೆಕ್ಟ್  : ‘ಗಂಧದ ಗುಡಿ’ ಟೀಸರ್ ಬಿಡುಗಡೆ – Vishwanews24

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬದಂದೆ ದಿ. ನಟ ಪುನೀತ್ ರಾಜ್‍ಕುಮಾರ್‌ ಅವರ ಕನಸಿನ ಗಂಧದಗುಡಿ‌ ಸಾಕ್ಷ್ಯಚಿತ್ರದ ಟೈಟಲ್​ ಟೀಸರ್ ರಿಲೀಸ್ ಆಗಿದೆ.

ನ.1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅದರ ಟೈಟಲ್​ ಟೀಸರ್​ ಲಾಂಚ್​ ಮಾಡಬೇಕು ಎಂಬುದು ಅವರ ಪುನೀತ್‌ ಅವರ ಕನಸಾಗಿತ್ತು. ಆದರೆ ಅದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಇಂದು (ಡಿ.6) ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್​ ಅನಾವರಣ ಮಾಡಲಾಗಿದೆ.

ಗಂಧದ ಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದ ಗುಡಿ ಟೀಸರ್‌ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್​ಕುಮಾರ್​ ಹಾಗೂ ಶಿವರಾಜ್​​ಕುಮಾರ್​ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್‌ ನೋಡಿದ ಅಭಿಮಾನಿಗಳು ಸಖತ್‌ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.

PRK ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಪ್ರಸಿದ್ಧ ಅರಣ್ಯಗಳನ್ನೆಲ್ಲಾ ಅಪ್ಪು ಸುತ್ತಿದ್ರು. ಕರ್ನಾಟಕದ ಸೌಂದರ್ಯವನ್ನು ಈ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿದೆ. ಹೀಗಾಗಿ ಇದಕ್ಕೆ ಗಂಧದ ಗುಡಿ ಎಂದು ಹೆಸರಿಡಲಾಗಿದೆ. 1 ನಿಮಿಷ 20 ಸೆಕೆಂಡ್‌ ಇರುವ ಈ ಟೀಸರ್‌ ರೋಮಾಂಚನಕಾರಿಯಾಗಿದೆ. 5 ದಶಕಗಳ ನಂತರ ಮತ್ತೆ ಗಂಧದಗುಡಿ ಅಭಿಮಾನಿಗಳ ಎದುರು ಬರಲಿದೆ ಎನ್ನುವುದು ಸಂತೋಷದ ವಿಚಾರವಾಗಿದೆ.

 

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

14 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

16 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

16 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

17 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

17 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

17 hours ago