ಬೆಂಗಳೂರು: ಪಾರ್ವತಮ್ಮ ರಾಜ್ಕುಮಾರ್ ಹುಟ್ಟುಹಬ್ಬದಂದೆ ದಿ. ನಟ ಪುನೀತ್ ರಾಜ್ಕುಮಾರ್ ಅವರ ಕನಸಿನ ಗಂಧದಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ರಿಲೀಸ್ ಆಗಿದೆ.
ನ.1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅದರ ಟೈಟಲ್ ಟೀಸರ್ ಲಾಂಚ್ ಮಾಡಬೇಕು ಎಂಬುದು ಅವರ ಪುನೀತ್ ಅವರ ಕನಸಾಗಿತ್ತು. ಆದರೆ ಅದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಇಂದು (ಡಿ.6) ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್ ಅನಾವರಣ ಮಾಡಲಾಗಿದೆ.
ಗಂಧದ ಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದ ಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್ಕುಮಾರ್ ಹಾಗೂ ಶಿವರಾಜ್ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.
PRK ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಪ್ರಸಿದ್ಧ ಅರಣ್ಯಗಳನ್ನೆಲ್ಲಾ ಅಪ್ಪು ಸುತ್ತಿದ್ರು. ಕರ್ನಾಟಕದ ಸೌಂದರ್ಯವನ್ನು ಈ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿದೆ. ಹೀಗಾಗಿ ಇದಕ್ಕೆ ಗಂಧದ ಗುಡಿ ಎಂದು ಹೆಸರಿಡಲಾಗಿದೆ. 1 ನಿಮಿಷ 20 ಸೆಕೆಂಡ್ ಇರುವ ಈ ಟೀಸರ್ ರೋಮಾಂಚನಕಾರಿಯಾಗಿದೆ. 5 ದಶಕಗಳ ನಂತರ ಮತ್ತೆ ಗಂಧದಗುಡಿ ಅಭಿಮಾನಿಗಳ ಎದುರು ಬರಲಿದೆ ಎನ್ನುವುದು ಸಂತೋಷದ ವಿಚಾರವಾಗಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…