Featured

ಅಪ್ಪ, ಮಕ್ಕಳದ್ದು ಇದೇ ಆಗೋಯ್ತು! ಸಿಎಂ ಕಣ್ಣೀರಿಗೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಷಕಂಠನಂತೆ ನೋವು ನುಂಗುತ್ತಿದ್ದೇನೆ ಎಂಬ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಜೆಡಿಎಸ್ ವರಷ್ಠಿ ದೇವೇಗೌಡ ಹಾಗೂ ಅವರ ಮಗ ಸಿಎಂ ಕುಮಾರಸ್ವಾಮಿ ಜನರ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳಲು ಕಣ್ಣೀರು ಸುರಿಸುತ್ತಿದ್ದಾರೆ, ಈ ಅಪ್ಪ, ಮಕ್ಕಳದ್ದು ಇದೇ ಆಗೋಯ್ತು ಎಂದು ತಮ್ಮ ಆಪ್ತರ ಬಳಿ ಲೇವಡಿ ಮಾಡಿದ್ದಾರೆ ಎನ್ನಲಾಗಿದೆ.

ಸಿಎಂ ಕುಮಾರಸ್ವಾಮಿ ಈ ಹೇಳಿಕೆಯಿಂದ ಸಿಎಂಗೆ ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಎಂಬ ಭಾವನೆ ಮೂಡಿಸುವಂತಿದೆ. ಇದು ಪಕ್ಷಕ್ಕೆ ಹಾನಿ ಉಂಟುಮಾಡಲಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾನಿ ಮಾಡುವುದು ಕುಮಾರಸ್ವಾಮಿ, ದೇವೇಗೌಡರ ಉದ್ದೇಶನಾ ಎಂಬ ಕುರಿತು ಸಿಎಂ ಸ್ಪಷ್ಟನೆ ನೀಡಬೇಕು. ಈ ರೀತಿ ಪದೇ ಪದೇ ಹೇಳಿಕೆ ನೀಡುವುದರಿಂದ ಈ ಎಲ್ಲ ಅಂಶಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಪರಿಣಾಮ ಬಿರುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೂ ಈ ಎಲ್ಲಾ ವಿಚಾರಗಳನ್ನು ಚರ್ಚಿಸಿದ್ದು, ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸೋಣ ಎಂದು ವೇಣುಗೋಪಾಲ್ ಸಿದ್ದರಾಮಯ್ಯಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago