ಬೆಂಗಳೂರು: 2018ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರದ ಗದ್ದುಗೆ ಹಿಡಿಯಲು ವಿಫಲವಾಯಿತು. ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಬಳಿಕ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಿ.ಎಸ್. ಯಡಿಯೂರಪ್ಪ ನುಡಿದಿದ್ದ ಭವಿಷ್ಯ ಇಂದು ನಿಜವಾಗಿದೆ.
ನಾನು ಸದನದಲ್ಲಿ ಹೇಳಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 40 ವರ್ಷದ ರಾಜಕಾರಣದ ಅನುಭವದ ಮೇಲೆ ನಾನು ಆ ಮಾತನ್ನು ಹೇಳಿದ್ದೆ. ಸರ್ಕಾರದ ಅಳಿವು ಉಳಿವಿನ ಬಗ್ಗೆ ನಾನು ಈಗ ಏನನ್ನು ಹೇಳುವುದಿಲ್ಲ. ರಾಷ್ಟ್ರೀಯ ನಾಯಕರ ಜತೆ ಸಂಪರ್ಕಿಸಿ ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ನಿನ್ನೆ ಹೊರಬಿದ್ದ ಲೋಕಸಭಾ ಚುನಾವಣೆ 2019ರ ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಹೊರತು ಪಡಿಸಿ ರಾಜ್ಯದ ಇನ್ನಾವ ಭಾಗದಲ್ಲೂ ಕಾಂಗ್ರೆಸ್ಗೆ ಸಾಧ್ಯವಾಗಿಲ್ಲ. ರಾಜಕೀಯ ಪ್ರವೇಶಿಸಿದ ದಿನದಿಂದ ಇಂದಿನವರೆಗೂ ಒಂದೇ ಒಂದು ಸೋಲನ್ನೂ ಕಾಣದೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಕೂಡ ಈ ಬಾರಿ ಸೋತಿದ್ದಾರೆ. ಯಡಿಯೂರಪ್ಪ ನುಡಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಹೆಸರಿಲ್ಲದಂತಾಗಿದೆ. ಇದೀಗ ಯಡಿಯೂರಪ್ಪ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ವರ್ಷದ ಹಿಂದೆ ವಿಧಾನಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡುತ್ತ, ಕೇಳಿ ಶಿವಕುಮಾರ್ ಅವರೇ, ನಿಮ್ಮನ್ನ ಇನ್ನು ಕೆಲವೇ ತಿಂಗಳುಗಳಲ್ಲಿ ಕಾಂಗ್ರೆಸ್ ಅನ್ನೋ ಹೆಸರನ್ನ ಇಲ್ಲದಂತೆ ಅಪ್ಪ-ಮಕ್ಕಳು ಸೇರಿ ಮಾಡದಿದ್ದರೆ, ನನ್ನ ಹೆಸರನ್ನು ಯಡಿಯೂರಪ್ಪ ಎಂದು ನೀವು ಕರೆಯಬೇಡಿ” ಎಂದಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…