Featured

ಅಪ್ರಾಪ್ತ ಬಾಲಕಿಯ ಅತ್ಯಾಚಾರ ; ಓ ಮೈ ಗಾಡ್ ! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟಾರ್ ಭಾರ್ಗವ್ ಬಂಧನ -Vishwanews24

ಅಪ್ರಾಪ್ತ ಬಾಲಕಿಯ ಅತ್ಯಾಚಾರ ; ಓ ಮೈ ಗಾಡ್ ! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟಾರ್ ಭಾರ್ಗವ್ ಬಂಧನ -Vishwanews24

ವಿಶಾಖಪಟ್ಟಣಂ: ಓ ಮೈ ಗಾಡ್! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟ್ರಾರ್ ಚಿಪ್ಪಡಾ ಭಾರ್ಗವ್ ಅಲಿಯಾಸ್ ಫನ್‌ ಬಕೆಟ್ ಭಾರ್ಗವ್ ನನ್ನು ವಿಶಾಖಪಟ್ಟಣಂನಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಂಧ್ರ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತೆಯ ಕುಟುಂಬ ಸದಸ್ಯರು ಏಪ್ರಿಲ್ 16ರಂದು ವಿಶಾಖಪಟ್ಟಣಂ ಕಮಿಷನರೇಟ್ ಅಡಿಯಲ್ಲಿ ಪೆಂಡುರ್ತಿ ಪೊಲೀಸ್ ಠಾಣೆಗೆ ದೂರು ನೀಡಿದಾಗ ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿದೆ. ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿ ಎಂದು ಕುಟುಂಬಕ್ಕೆ ತಿಳಿದ ನಂತರ ದೂರು ದಾಖಲಿಸಲಾಗಿದೆ. ನಂತರ ಆರೋಪಿಯನ್ನು ಆಂಧ್ರ ಪೊಲೀಸರು ಹೈದರಾಬಾದ್ ನ ಕೊಂಪಲ್ಲಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ : ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24

ಆರೋಪಿ ಭಾರ್ಗವ್ ಸಂತ್ರಸ್ತೆಯನ್ನು ಕೆಲವು ಟಿಕ್ ಟಾಕ್ ವೀಡಿಯೊಗಳಲ್ಲಿ ನೋಡಿ ಆಕೆಯನ್ನು ಸಂಪರ್ಕಿಸಿ ಮಾಧ್ಯಮ ಚಾನೆಲ್ ಗಳಲ್ಲಿ ಆಫರ್ ಕೊಡಿಸುವುದಾಗಿ ಭರವಸೆ ನೀಡಿ ಬಳಿಕ ಆಕೆಗೆ ಪ್ರಪೋಸ್ ಮಾಡಿದ್ದಾನೆ. ಆದರೆ ಅದನ್ನು ಆಕೆ ತಿರಸ್ಕರಿಸಿದ್ದಳು. ಇದಾದ ಬಳಿಕ ಆಕೆಯ ವಿಡಿಯೋಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದ್ದನು ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಸಹಾಯಕ ಪೊಲೀಸ್ ಆಯುಕ್ತ ಪ್ರೇಮ್ ಕಾಜಲ್, ಸಂತ್ರಸ್ತೆ ಗರ್ಭಿಣಿಯಾಗಿದ್ದು, ಪೋಕ್ಸೊ ಕಾಯ್ದೆಯನ್ನು ಹೊರತುಪಡಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಲೈಂಗಿಕ ದೌರ್ಜನ್ಯಕ್ಕಾಗಿ ಶಿಕ್ಷೆ), 354 (ಮಹಿಳೆಗೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಅಡಿಯಲ್ಲಿ ಭಾರ್ಗವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮೇ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಬನ್ ಬಕೆಟ್ ಖ್ಯಾತಿಯ ನಿತ್ಯಾ ನಾನು ಕಳೆದ 12 ತಿಂಗಳುಗಳಿಂದ ಭಾರ್ಗವ್ ಅವರೊಂದಿಗೆ ಸಂಪರ್ಕದಲ್ಲಿರಲಿಲ್ಲ , ಸಾಮಾಜಿಕ ಮಾಧ್ಯಮಗಳ ಮೂಲಕ ಭಾರ್ಗವ್ ಬಂಧನದ ವಿಚಾರ ತಿಳಿದುಬಂದಿದೆ. ಇನ್ನು ಕೆಲವು ಸಾಮಾಜಿಕ ಮಾಧ್ಯಮಗಳು ಭಾರ್ಗವ್‌ನಿಂದ ಅತ್ಯಾಚಾರಕ್ಕೊಳಗಾದಂತೆ ಬಿಂಬಿಸಲು ಬಳಸುತ್ತಿರುವ ತನ್ನ ಫೋಟೋಗಳನ್ನು ಅಳಿಸುವಂತೆ ನಿತ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೇ 29ಕ್ಕೆ ಅಂತಿಮ ತೀರ್ಪು -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago