ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ ನಡೆದಿದ್ದು ಅನ್ಯಕೋಮಿನ ಯುವಕನ ಮೇಲೆ ಬಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ಡ್ಯಾನ್ಸ್ ಮಾಸ್ಟರ್ ವಿರುದ್ದ ಲವ್ ಜಿಹಾದ್ ಆರೋಪವಿದ್ದು, ಅಪ್ರಾಪ್ತ ಬಾಲಕಿ ಜೊತೆ ಯುವಕ ಸುತ್ತಾಡುತ್ತಿದ್ದ ಎಂಬ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ.
ಡ್ಯಾನ್ಸ್ ಮಾಸ್ಟರ್ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಭಜರಂಗದಳ ಜಿಲ್ಲಾ ಸಂಚಾಲಕ ಸಿ.ಡಿ.ಶಿವಕುಮಾರ್, ಸ್ವರೂಪ್, ಕಾರ್ತಿಕ್, ಮಧು, ರಂಜಿತ್, ಪರೀಕ್ಷಿತ್, ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ.
ಅಪ್ರಾಪ್ತ ಬಾಲಕಿಯ ಜತೆ ಸುತ್ತಾಡುತ್ತಿದ್ದ ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ದ ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕಿಯ ಜತೆ ರೂಮನ್ ಓಡಾಡಿದ ವಿಡಿಯೋ ಮತ್ತು ಪೋಟೋಗಳು ವೈರಲ್ ಆಗಿದೆ.
ಆಲ್ದೂರು ಸಮೀಪದ ಗಾಳಿಗಂಡಿಯ ಯುವಕ ರೂಮನ್, ತನ್ನನ್ನು ಭಜರಂಗ ದಳದ ಕಾರ್ಯಕರ್ತರು ಆಲ್ದೂರಿಗೆ ಕರೆಸಿ ಬಳಿಕ ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದ. ಅಲ್ಲದೇ ಇದೀಗ ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ಧ ಸಹ ಬಾಲಕಿಯ ಪೋಷಕರು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಪ್ರಕರಣ ದಾಖಲಿಸಿದ್ದಾರೆ.
ಘಟನೆ ಹಿನ್ನಲೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…