ಮಂಡ್ಯ: ಮುಸ್ಲಿಂ ವಿವಾಹಿತನೋರ್ವ ಹಿಂದೂ ಧರ್ಮದ ಬಾಲಕಿಯ ಅಶ್ಲೀಲ ವೀಡಿಯೋ ಚಿತ್ರಿಸಿ, ಬಳಿಕ ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ವೆಸಗಿದ್ದಾನೆ. ಅಲ್ಲದೇ ತನ್ನ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವ ಆಸೆಯನ್ನು ತೋರಿಸಿದ್ದಾನೆ.
ಸಕ್ಕರೆ ನಾಡು ಮಂಡ್ಯದಲ್ಲಿ ಇತ್ತೀಚಿಗೆ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಮುಸ್ಲಿಂ ವಿವಾಹಿತನೊಬ್ಬ ಹಿಂದೂ ಧರ್ಮದ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ, ತನ್ನ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವುದಾಗಿ ಆಸೆ ತೋರಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ✴️ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ – Vishwanews24
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು 25 ವರ್ಷದ ಯೂನಸ್ ಫಾಷ ಎಂದು ಗುರುತಿಸಲಾಗಿದೆ. ಎದುರು ಮನೆಯಲ್ಲೇ ವಾಸವಿದ್ದ ಬಾಲಕಿಯ ಸ್ನೇಹ ಸಂಪಾದಿಸಿದ್ದ ಯೂನಸ್ ಪಾಷ, ಹೆತ್ತವರಿಗೆ ತಿಳಿಯದಂತೆ ಮೊಬೈಲ್ ಕೊಡಿಸಿದ್ದ. ಬಳಿಕ ವೀಡಿಯೋ ಕಾಲ್ನಲ್ಲಿ ಬಾಲಕಿಯನ್ನು ಪುಸಲಾಯಿಸಿ ಬೆತ್ತಲೆ ವೀಡಿಯೋ ರೆಕಾರ್ಡ್ ಮಾಡಿಕೊಂಡಿದ್ದ. ಆ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದಲ್ಲದೇ, ಮುಸ್ಲಿಂ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವ ಆಸೆಯನ್ನು ತೋರಿಸಿ ನವೆಂಬರ್ 11ರಂದು ಅತ್ಯಾಚಾರ ಮಾಡಿದ್ದಾನೆ.
ಬಾಲಕಿಯ ತಂದೆ ನವೆಂಬರ್ 8 ರಂದು ಶಿರಡಿಗೆ ಹೋಗಿದ್ದರು. ಈ ವೇಳೆ ತಾಯಿಯೊಂದಿಗೆ ಅಜ್ಜಿ ಮನೆಗೆ ಹೋಗಿದ್ದ ಬಾಲಕಿಗೆ ನಿದ್ರೆ ಮಾತ್ರೆಯನ್ನು ಪುಡಿ ಮಾಡಿ ನೀಡಿದ್ದ ಕಾಮುಕ ಯೂನಸ್, ನವೆಂಬರ್ 11ರ ರಾತ್ರಿ ಸಾಂಬಾರಿಗೆ ಹಾಕಿಸಿದ್ದ. ಬಳಿಕ ಮನೆಯೊಳಗೆ ಬಂದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆದಾದ ಬಳಿಕ ಬಾಲಕಿಯ ನಡುವಳಿಕೆಯಲ್ಲಾದ ಬದಲಾವಣೆ ಗಮನಿಸಿದ ಪೋಷಕರು ವಿಚಾರಿಸಿದಾಗ ಅತ್ಯಾಚಾರ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ 19ರಂದು ಬಾಲಕಿಯ ತಂದೆ ದೂರು ನೀಡಿದ್ದು, ಸದ್ಯ ಪೊಲೀಸರು ಯೂನಸ್ ಪಾಷನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…