Featured

ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶರಣರ ವಿರುದ್ಧ ಎಫ್ಐಆರ್ – Vishwanews24

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶರಣರ ವಿರುದ್ಧ ಎಫ್ಐಆರ್

ಮೈಸೂರು: ತಮ್ಮದೇ ಮಠ ನಡೆಸುವ ಫ್ರೌಢಶಾಲೆಯ ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮಠದ ಉಚಿತ ಹಾಸ್ಟೆಲ್‌ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ, ದೌರ್ಜನ್ಯಕ್ಕೆ ಒಳಗಾದವರೆನ್ನಲಾದ ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ಶುಕ್ರವಾರ ದೂರು ನೀಡಿದ್ದಾರೆ. ದೂರು ಪಡೆದು, ಆಪ್ತ ಸಮಾಲೋಚನೆ ನಡೆಸಿರುವ ಸಂಸ್ಥೆಯು ಮಧ್ಯಾಹ್ನವೇ ಈ ಬಾಲಕಿಯರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದೆ.

ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ – Vishwanews24

ಇದೀಗ ಮಠದ ಸ್ವಾಮಿಜಿ ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ. ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ದೂರು ’ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ‘ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago