Featured

ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಪಾಕ್‌ನಲ್ಲಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ : ಶೇಖ್ ರಶೀದ್ -Vishwanews24

ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಪಾಕ್‌ನಲ್ಲಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ : ಶೇಖ್ ರಶೀದ್ -Vishwanews24

ಇಸ್ಲಾಮಾಬಾದ್‌: ‘ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ’ ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಹೇಳಿದ್ದಾರೆ.

‘ಈಗಾಗಲೇ ಪಾಕಿಸ್ತಾನದಲ್ಲಿ 30 ಲಕ್ಷ ಅಫ್ಗನ್ ನಿರಾಶ್ರಿತರು ಇದ್ದಾರೆ. ಅಲ್ಲದೆ ಪಾಕಿಸ್ತಾನಕ್ಕೆ ಪ್ರವೇಶಿಸಲು ಗಡಿ ಬಳಿ ಜನರು ಗುಂಪುಗೂಡಿದ್ದಾರೆ’ ಎಂದು ವರದಿಯೊಂದು ಹೇಳಿತ್ತು.

ಇದರ ಬೆನ್ನಲ್ಲೇ ಅಫ್ಗಾನೊಂದಿಗಿನ ಟಾರ್ಕಮ್‌ ಗಡಿ ಪ್ರದೇಶಕ್ಕೆ ರಶೀದ್‌ ಅವರು ಭಾನುವಾರ ಭೇಟಿ ನೀಡಿದರು. ಆ ಬಳಿಕ ಮಾತನಾಡಿದ ಅವರು,‘ ಟಾರ್ಕಮ್‌ ಗಡಿ ಪ್ರದೇಶದಲ್ಲಿ ಯಾವುದೇ ಅಫ್ಗನ್‌ ನಿರಾಶ್ರಿತರಿಲ್ಲ. ನಾವು ಇಲ್ಲಿ ಹೊಸ ಶಿಬಿರವನ್ನು ಸ್ಥಾಪಿಸಿಲ್ಲ’ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಸಿನೆಸ್ ರೆಕಾರ್ಡರ್ ಪತ್ರಿಕೆ ವರದಿ ಮಾಡಿದೆ.

‘ಪಾಕಿಸ್ತಾನದಲ್ಲಿ ಅರ್ಧದಷ್ಟು ಅಫ್ಗನ್‌ ನಿರಾಶ್ರಿತರು ಕಾನೂನು ಬಾಹಿರವಾಗಿ ವಾಸವಾಗಿದ್ದಾರೆ. ಅವರು ಈವರೆಗೆ ದೇಶದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ. ಅಧಿಕೃತವಾಗಿ ನೊಂದಾಯಿಸಿಕೊಂಡಿರುವ 15 ಲಕ್ಷ ಜನರು ಮಾತ್ರ ಇಲ್ಲಿ ಉಳಿಯಲು, ಓಡಾಡಲು ಮತ್ತು ವ್ಯವಹಾರ ನಡೆಸುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ’ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದರು.

‘ಅಫ್ಗಾನಿಸ್ತಾನದಲ್ಲಿ ಬಿಕ್ಕಟ್ಟು ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಇನ್ನು ಮುಂದೆ ನಾವು ಅಫ್ಗನ್‌ ನಿರಾಶ್ರಿತರಿಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಪಾಕಿಸ್ತಾನ ಹೇಳಿತ್ತು. ಆದರೆ, ಸಚಿವರುಗಳು ಅಫ್ಗನ್‌ ನಿರಾಶ್ರಿತರಿಗೆ ಉಳಿಯಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಪಾಕಿಸ್ತಾನವನ್ನು ಪ್ರವೇಶಿಸಲು ಅಫ್ಗಾನಿಸ್ತಾನದ 4,000 ಜನರಿಗೆ ವೀಸಾ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತವಾಗಿ ಪಾಕಿಸ್ತಾನ ಮಂಜೂರು ಮಾಡಿದೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago