ಇಸ್ಲಾಮಾಬಾದ್: ‘ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ’ ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಹೇಳಿದ್ದಾರೆ.
‘ಈಗಾಗಲೇ ಪಾಕಿಸ್ತಾನದಲ್ಲಿ 30 ಲಕ್ಷ ಅಫ್ಗನ್ ನಿರಾಶ್ರಿತರು ಇದ್ದಾರೆ. ಅಲ್ಲದೆ ಪಾಕಿಸ್ತಾನಕ್ಕೆ ಪ್ರವೇಶಿಸಲು ಗಡಿ ಬಳಿ ಜನರು ಗುಂಪುಗೂಡಿದ್ದಾರೆ’ ಎಂದು ವರದಿಯೊಂದು ಹೇಳಿತ್ತು.
ಇದರ ಬೆನ್ನಲ್ಲೇ ಅಫ್ಗಾನೊಂದಿಗಿನ ಟಾರ್ಕಮ್ ಗಡಿ ಪ್ರದೇಶಕ್ಕೆ ರಶೀದ್ ಅವರು ಭಾನುವಾರ ಭೇಟಿ ನೀಡಿದರು. ಆ ಬಳಿಕ ಮಾತನಾಡಿದ ಅವರು,‘ ಟಾರ್ಕಮ್ ಗಡಿ ಪ್ರದೇಶದಲ್ಲಿ ಯಾವುದೇ ಅಫ್ಗನ್ ನಿರಾಶ್ರಿತರಿಲ್ಲ. ನಾವು ಇಲ್ಲಿ ಹೊಸ ಶಿಬಿರವನ್ನು ಸ್ಥಾಪಿಸಿಲ್ಲ’ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಸಿನೆಸ್ ರೆಕಾರ್ಡರ್ ಪತ್ರಿಕೆ ವರದಿ ಮಾಡಿದೆ.
‘ಪಾಕಿಸ್ತಾನದಲ್ಲಿ ಅರ್ಧದಷ್ಟು ಅಫ್ಗನ್ ನಿರಾಶ್ರಿತರು ಕಾನೂನು ಬಾಹಿರವಾಗಿ ವಾಸವಾಗಿದ್ದಾರೆ. ಅವರು ಈವರೆಗೆ ದೇಶದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ. ಅಧಿಕೃತವಾಗಿ ನೊಂದಾಯಿಸಿಕೊಂಡಿರುವ 15 ಲಕ್ಷ ಜನರು ಮಾತ್ರ ಇಲ್ಲಿ ಉಳಿಯಲು, ಓಡಾಡಲು ಮತ್ತು ವ್ಯವಹಾರ ನಡೆಸುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ’ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದರು.
‘ಅಫ್ಗಾನಿಸ್ತಾನದಲ್ಲಿ ಬಿಕ್ಕಟ್ಟು ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಇನ್ನು ಮುಂದೆ ನಾವು ಅಫ್ಗನ್ ನಿರಾಶ್ರಿತರಿಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಪಾಕಿಸ್ತಾನ ಹೇಳಿತ್ತು. ಆದರೆ, ಸಚಿವರುಗಳು ಅಫ್ಗನ್ ನಿರಾಶ್ರಿತರಿಗೆ ಉಳಿಯಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಪಾಕಿಸ್ತಾನವನ್ನು ಪ್ರವೇಶಿಸಲು ಅಫ್ಗಾನಿಸ್ತಾನದ 4,000 ಜನರಿಗೆ ವೀಸಾ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತವಾಗಿ ಪಾಕಿಸ್ತಾನ ಮಂಜೂರು ಮಾಡಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…