Featured

ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಪಾಕ್‌ನಲ್ಲಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ : ಶೇಖ್ ರಶೀದ್ -Vishwanews24

ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಪಾಕ್‌ನಲ್ಲಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ : ಶೇಖ್ ರಶೀದ್ -Vishwanews24

ಇಸ್ಲಾಮಾಬಾದ್‌: ‘ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ’ ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಹೇಳಿದ್ದಾರೆ.

‘ಈಗಾಗಲೇ ಪಾಕಿಸ್ತಾನದಲ್ಲಿ 30 ಲಕ್ಷ ಅಫ್ಗನ್ ನಿರಾಶ್ರಿತರು ಇದ್ದಾರೆ. ಅಲ್ಲದೆ ಪಾಕಿಸ್ತಾನಕ್ಕೆ ಪ್ರವೇಶಿಸಲು ಗಡಿ ಬಳಿ ಜನರು ಗುಂಪುಗೂಡಿದ್ದಾರೆ’ ಎಂದು ವರದಿಯೊಂದು ಹೇಳಿತ್ತು.

ಇದರ ಬೆನ್ನಲ್ಲೇ ಅಫ್ಗಾನೊಂದಿಗಿನ ಟಾರ್ಕಮ್‌ ಗಡಿ ಪ್ರದೇಶಕ್ಕೆ ರಶೀದ್‌ ಅವರು ಭಾನುವಾರ ಭೇಟಿ ನೀಡಿದರು. ಆ ಬಳಿಕ ಮಾತನಾಡಿದ ಅವರು,‘ ಟಾರ್ಕಮ್‌ ಗಡಿ ಪ್ರದೇಶದಲ್ಲಿ ಯಾವುದೇ ಅಫ್ಗನ್‌ ನಿರಾಶ್ರಿತರಿಲ್ಲ. ನಾವು ಇಲ್ಲಿ ಹೊಸ ಶಿಬಿರವನ್ನು ಸ್ಥಾಪಿಸಿಲ್ಲ’ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಸಿನೆಸ್ ರೆಕಾರ್ಡರ್ ಪತ್ರಿಕೆ ವರದಿ ಮಾಡಿದೆ.

‘ಪಾಕಿಸ್ತಾನದಲ್ಲಿ ಅರ್ಧದಷ್ಟು ಅಫ್ಗನ್‌ ನಿರಾಶ್ರಿತರು ಕಾನೂನು ಬಾಹಿರವಾಗಿ ವಾಸವಾಗಿದ್ದಾರೆ. ಅವರು ಈವರೆಗೆ ದೇಶದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ. ಅಧಿಕೃತವಾಗಿ ನೊಂದಾಯಿಸಿಕೊಂಡಿರುವ 15 ಲಕ್ಷ ಜನರು ಮಾತ್ರ ಇಲ್ಲಿ ಉಳಿಯಲು, ಓಡಾಡಲು ಮತ್ತು ವ್ಯವಹಾರ ನಡೆಸುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ’ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದರು.

‘ಅಫ್ಗಾನಿಸ್ತಾನದಲ್ಲಿ ಬಿಕ್ಕಟ್ಟು ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಇನ್ನು ಮುಂದೆ ನಾವು ಅಫ್ಗನ್‌ ನಿರಾಶ್ರಿತರಿಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಪಾಕಿಸ್ತಾನ ಹೇಳಿತ್ತು. ಆದರೆ, ಸಚಿವರುಗಳು ಅಫ್ಗನ್‌ ನಿರಾಶ್ರಿತರಿಗೆ ಉಳಿಯಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಪಾಕಿಸ್ತಾನವನ್ನು ಪ್ರವೇಶಿಸಲು ಅಫ್ಗಾನಿಸ್ತಾನದ 4,000 ಜನರಿಗೆ ವೀಸಾ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತವಾಗಿ ಪಾಕಿಸ್ತಾನ ಮಂಜೂರು ಮಾಡಿದೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

16 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

53 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

59 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago