Featured

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ – vishwanews24

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು : ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

ಕಾಬೂಲ್ : ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ.

ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ನಾಗರಿಕರಿಗೆ ಸಂತಾಪ ಸೂಚಿಸಿದ್ದಾರೆ.

“ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು. ಭಾರತ ಇಂದು ಕಾಬೂಲ್‌ನಲ್ಲಿ 1000 ಕುಟುಂಬ ಡೇರೆಗಳನ್ನು ತಲುಪಿಸಿದೆ. ಭಾರತೀಯ ಮಿಷನ್ 15 ಟನ್ ಆಹಾರ ಸಾಮಗ್ರಿಗಳನ್ನು ತಕ್ಷಣವೇ ಕಾಬೂಲ್‌ನಿಂದ ಕುನಾರ್‌ಗೆ ಸಾಗಿಸುತ್ತಿದೆ” ಎಂದು ಜೈಶಂಕರ್ ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಮಾತ್ರ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಪ್ರಕಾರ, ಸ್ಥಳೀಯ ಸಮಯ ರಾತ್ರಿ 11:47 ಕ್ಕೆ 8 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್‌ನಿಂದ ಪೂರ್ವ-ಈಶಾನ್ಯಕ್ಕೆ 27 ಕಿ.ಮೀ ದೂರದಲ್ಲಿದೆ.

ಕುನಾರ್ ಪ್ರಾಂತ್ಯದಲ್ಲಿ ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಾಪಾ ದಾರಾ ಪ್ರದೇಶಗಳು ಅತಿ ಹೆಚ್ಚು ಹಾನಿಗೊಳಗಾಗಿವೆ. ದುರ್ಬಲವಾದ ಮಣ್ಣು ಮತ್ತು ಕಲ್ಲಿನಿಂದ ನಿರ್ಮಿಸಲಾದ ಇಡೀ ಹಳ್ಳಿಗಳು ಭೂಕಂಪದಿಂದಾಗಿ ಕುಸಿದಿವೆ. ಭೂಕುಸಿತಗಳು ಪ್ರಮುಖ ಮಾರ್ಗಗಳನ್ನು ಮುಚ್ಚಿಹಾಕಿವೆ. ಇದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago