ಮುಂಬೈ: ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ ಎಂದರು.
ಅಫ್ಘಾನಿಸ್ತಾನದ ಮುಸ್ಲಿಂರಿಗೆ ಆಶ್ರಯ ಕಲ್ಪಿಸ ಬಾರದು. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಘ್ಘಾನಿಸ್ತಾನದಲ್ಲಿ ನೆತ್ತರಕೋಡಿ ಹರಿಸಿದ್ದು ನಾವೇ ಎಂದು ಇಸ್ಲಾಮಿಕ್ ಸ್ಟೇಟ್ ಐಎಸ್ಕೆಪಿ(ISKP) ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಅಮೆರಿಕ ನೇತೃತ್ವದಲ್ಲಿ ಸೇನಾ ಪಡೆಗಳ ಹಿಂತೆಗೆತ ಕಾರ್ಯಾಚರಣೆ ವೇಳೆ ಅಘ್ಘಾನಿಸ್ತಾನದಲ್ಲಿ ಏಳು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಬಳಿಕ ರಾತ್ರಿಯಿಡಿ ನೆತ್ತರು ಹರಿಸಿದ ಪಾಪಿಗಳು ನಾವು ಎಲ್ಲಾ ಭದ್ರತಾ ತಡೆಗೋಡೆಗಳನ್ನೂ ದಾಟಿ ಅಮೆರಿಕ ಭದ್ರತಾ ಪಡೆಗಳಿರುವ ಪ್ರದೇಶಕ್ಕಿಂತ 16 ಅಡಿ ದೂರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಕ್ಕೆ ಒಬ್ಬ ಬಾಂಬರ್ನಿಂದ ಸಾಧ್ಯವಾಗಿದೆ ಎಂದು ದಾಳಿಯ ಹೊಣೆ ಹೊತ್ತ ಐಎಸ್ಕೆಪಿ ಸಂಘಟನೆ ಪ್ರಚಾರ ಪಡೆದುಕೊಂಡಿದೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…