Featured

ಅಫ್ಘಾನಿಸ್ತಾನದ ನಾಗರಿಕರು ಏರ್‌ಪೋರ್ಟ್‌ಗೆ ತೆರಳಲು ಅವಕಾಶವಿಲ್ಲ , ಇಲ್ಲಿನ ಜನರು ಇಲ್ಲೇ ಇರಬೇಕು : ತಾಲಿಬಾನ್ ವಕ್ತಾರ -Vishwanews24

ಅಫ್ಘಾನಿಸ್ತಾನದ ನಾಗರಿಕರು ಏರ್‌ಪೋರ್ಟ್‌ಗೆ ತೆರಳಲು ಅವಕಾಶವಿಲ್ಲ , ಇಲ್ಲಿನ ಜನರು ಇಲ್ಲೇ ಇರಬೇಕು : ತಾಲಿಬಾನ್ ವಕ್ತಾರ -Vishwanews24

ಅಫ್ಘಾನಿಸ್ತಾನದ ನಾಗರಿಕರು ಏರ್‌ಪೋರ್ಟ್‌ಗೆ ತೆರಳಲು ಅವಕಾಶವಿಲ್ಲ. ಇಲ್ಲಿನ ಜನರು ಇಲ್ಲೇ ಇರಬೇಕು. ಅವರಿಗೆ ದೇಶ ಬಿಟ್ಟು ಹೋಗಲು ಅನುಮತಿ ಇಲ್ಲ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಹೇಳಿಕೆ ನೀಡಿದ್ಧಾನೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಯರದ್ದೇ ಪಾರುಪತ್ಯವಾಗಿದ್ದು ಅವರು ಹೇಳಿದ್ದೇ ಅಂತಿಮ ಎಂಬಂತಾಗಿದೆ.

ಅವರ ಅಟ್ಟಹಾಸಕ್ಕೆ ಹೆದರಿ ಜನ ಗುಂಪುಗುಂಪಾಗಿ ದೇಶ ತೊರೆಯುತ್ತಿದ್ದು ಪ್ರಪಂಚದ ಯಾವುದೋ ಒಂದು ಮೂಲೆಯಲ್ಲಿ ಹಿಡಿ ಜಾಗ ಸಿಕ್ಕರೂ ಜೀವ ಉಳಿಸಿಕೊಳ್ಳಬಹುದು ಎಂದು ಯೋಚಿಸುತ್ತಿದ್ದಾರೆ. ಆದರೆ, ಇದೀಗ ದೇಶ ಬಿಟ್ಟು ಹೋಗುವವರಿಗೆ ತಾಲಿಬಾನ್​ ತಡೆಯೊಡ್ಡಿದ್ದು, ಇನ್ನು ಮುಂದೆ ಅಫ್ಘಾನಿಸ್ತಾನದ ನಾಗರೀಕರು ಯಾರೂ ದೇಶದಿಂದ ಹೊರ ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಅಫ್ಘಾನಿಸ್ತಾನದ ನಾಗರಿಕರು ಏರ್‌ಪೋರ್ಟ್‌ಗೆ ತೆರಳಲು ಅವಕಾಶವಿಲ್ಲ. ಇಲ್ಲಿನ ಜನರು ಇಲ್ಲೇ ಇರಬೇಕು. ಅವರಿಗೆ ದೇಶ ಬಿಟ್ಟು ಹೋಗಲು ಅನುಮತಿ ಇಲ್ಲ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಹೇಳಿಕೆ ನೀಡಿದ್ಧಾನೆ. ಆಗಸ್ಟ್​​ 31ರ ಬಳಿಕ ವಿದೇಶಿಯರ ಸ್ಥಳಾಂತರ ಮುಂದುವರೆದರೆ ಅದು ಕೂಡಾ ಒಪ್ಪಂದದ ಉಲ್ಲಂಘನೆ ಆಗುತ್ತದೆ. ನೆರೆಹೊರೆ ದೇಶಗಳ ವಿರುದ್ಧ ಆಫ್ಘನ್ ನೆಲ ಬಳಕೆಗೆ ಅವಕಾಶವಿಲ್ಲ. ವಿದೇಶಿ ಪಡೆಗಳು ದೀರ್ಘಕಾಲ ಆಫ್ಘನ್‌ನಲ್ಲಿರಲು ಅವಕಾಶವಿಲ್ಲ. ವಿದೇಶಿ ರಾಯಭಾರ ಕಚೇರಿಗಳಿಗೆ ಭದ್ರತೆ ನೀಡುತ್ತೇವೆ. ಅವರು ಕೆಲಸ ಮುಂದುವರಿಸಬೇಕು. ರಾಯಭಾರಿಗಳಿಗೆ ಸಂಪೂರ್ಣ ಭದ್ರತೆ ನೀಡುವ ಹೊಣೆ ನಮ್ಮದು ಎಂದು ತಾಲಿಬಾನ್​ ಹೇಳಿಕೊಂಡಿದೆ.

ಅಫ್ಘಾನಿಸ್ತಾನದ ಜನರಿಗೆ ಕ್ಷಮಾದಾನ ಘೋಷಣೆ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಲು‌ ಪ್ರಯತ್ನ ಸಾಗಿದೆ ಎಂದು ಜಬೀವುಲ್ಲಾ ಹೇಳಿಕೆ ನೀಡಿದ್ದು, ತಾಲಿಬಾನ್‌ಗೆ ದ್ರೋಹ ಬಗೆದವರ ಬಗ್ಗೆ ಈಗ ಮಾತನಾಡಲ್ಲ. ಸಮಯ ಬಂದಾಗ ತಾಲಿಬಾನ್ ಈ ಬಗ್ಗೆ ಮಾತನಾಡುತ್ತೆ ಎಂದು ಹೇಳಿದ್ದಾನೆ. ಅಂತೆಯೇ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಸಾವಿನ ಬಗ್ಗೆಯೂ ಮಾತನಾಡಿದ್ದು, ಯುದ್ಧದ ಸಮಯದಲ್ಲಿ ಡ್ಯಾನಿಶ್ ಸಿದ್ದಿಕಿ ಸಾವು ಸಂಭವಿಸಿದೆ. ಯಾರ ಬುಲೆಟ್‌ನಿಂದ ಸಾವು ಸಂಭವಿಸಿದೆ ಎಂದು ಗೊತ್ತಿಲ್ಲ. ಡ್ಯಾನಿಶ್ ಸಿದ್ದಿಕಿ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿಸಿದ್ದಾನೆ.

ಒಂದು ವೇಳೆ ಆಮೆರಿಕಾ ಪಡೆ ಆಗಸ್ಟ್ 31 ರ ಬಳಿಕವೂ ಅಫ್ಘನ್​ನಲ್ಲಿದ್ದರೆ ತಾಲಿಬಾನ್ ನಾಯಕತ್ವ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೆ. ಪಂಜಶಿರ್ ಪ್ರಾಂತ್ಯದ ನಮ್ಮ ಸಹೋದರರು ಕಾಬೂಲ್​ಗೆ ಬರಬೇಕು. ನಮ್ಮ ಇಬ್ಬರ ಗುರಿ ಒಂದೇ ಹೆದರಬೇಡಿ. ಹೋರಾಟ ಬೇಡ. ವಾಪಸ್ ಬನ್ನಿ ಎಂದು ಪಂಜಶಿರ್ ಪ್ರಾಂತ್ಯದ ನಾಯಕರಿಗೆ ತಾಲಿಬಾನ್ ಕರೆ ನೀಡಿದೆ.

ಪತ್ರಿಕಾಗೋಷ್ಠಿ ನಡೆಸಿದ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಚೀನಾ ದೇಶವನ್ನು ಹಾಡಿ ಹೊಗಳಿದ್ದು, ಚೀನಾ ನಮ್ಮ ಒಳ್ಳೆಯ ನೆರೆಹೊರೆಯ ದೇಶ. ಚೀನಾದೊಂದಿಗೆ ಅಫ್ಘಾನಿಸ್ತಾನದ ಹೊಸ ಸರ್ಕಾರ ಒಳ್ಳೆಯ ಸಂಬಂಧ ಹೊಂದುತ್ತದೆ ಎಂದಿದ್ದಾನೆ. ಇನ್ನು ಮಹಿಳೆಯರ ಬಗ್ಗೆ ಮಾತನಾಡಿ, ಉದ್ಯೋಗಸ್ಥ ಮಹಿಳೆಯರು ಮನೆಯಲ್ಲಿ ಇರುವುದು ತಾತ್ಕಾಲಿಕ ಎಲ್ಲವೂ ಶೀಘ್ರದಲ್ಲೇ ಸರಿಹೋಗಲಿದೆ ಎಂಬ ಭರವಸೆ ನೀಡಿದ್ದಾನೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago