ಅಫ್ಘಾನಿಸ್ತಾನದ ನಾಗರಿಕರು ಏರ್ಪೋರ್ಟ್ಗೆ ತೆರಳಲು ಅವಕಾಶವಿಲ್ಲ. ಇಲ್ಲಿನ ಜನರು ಇಲ್ಲೇ ಇರಬೇಕು. ಅವರಿಗೆ ದೇಶ ಬಿಟ್ಟು ಹೋಗಲು ಅನುಮತಿ ಇಲ್ಲ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಹೇಳಿಕೆ ನೀಡಿದ್ಧಾನೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಯರದ್ದೇ ಪಾರುಪತ್ಯವಾಗಿದ್ದು ಅವರು ಹೇಳಿದ್ದೇ ಅಂತಿಮ ಎಂಬಂತಾಗಿದೆ.
ಅವರ ಅಟ್ಟಹಾಸಕ್ಕೆ ಹೆದರಿ ಜನ ಗುಂಪುಗುಂಪಾಗಿ ದೇಶ ತೊರೆಯುತ್ತಿದ್ದು ಪ್ರಪಂಚದ ಯಾವುದೋ ಒಂದು ಮೂಲೆಯಲ್ಲಿ ಹಿಡಿ ಜಾಗ ಸಿಕ್ಕರೂ ಜೀವ ಉಳಿಸಿಕೊಳ್ಳಬಹುದು ಎಂದು ಯೋಚಿಸುತ್ತಿದ್ದಾರೆ. ಆದರೆ, ಇದೀಗ ದೇಶ ಬಿಟ್ಟು ಹೋಗುವವರಿಗೆ ತಾಲಿಬಾನ್ ತಡೆಯೊಡ್ಡಿದ್ದು, ಇನ್ನು ಮುಂದೆ ಅಫ್ಘಾನಿಸ್ತಾನದ ನಾಗರೀಕರು ಯಾರೂ ದೇಶದಿಂದ ಹೊರ ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಅಫ್ಘಾನಿಸ್ತಾನದ ನಾಗರಿಕರು ಏರ್ಪೋರ್ಟ್ಗೆ ತೆರಳಲು ಅವಕಾಶವಿಲ್ಲ. ಇಲ್ಲಿನ ಜನರು ಇಲ್ಲೇ ಇರಬೇಕು. ಅವರಿಗೆ ದೇಶ ಬಿಟ್ಟು ಹೋಗಲು ಅನುಮತಿ ಇಲ್ಲ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಹೇಳಿಕೆ ನೀಡಿದ್ಧಾನೆ. ಆಗಸ್ಟ್ 31ರ ಬಳಿಕ ವಿದೇಶಿಯರ ಸ್ಥಳಾಂತರ ಮುಂದುವರೆದರೆ ಅದು ಕೂಡಾ ಒಪ್ಪಂದದ ಉಲ್ಲಂಘನೆ ಆಗುತ್ತದೆ. ನೆರೆಹೊರೆ ದೇಶಗಳ ವಿರುದ್ಧ ಆಫ್ಘನ್ ನೆಲ ಬಳಕೆಗೆ ಅವಕಾಶವಿಲ್ಲ. ವಿದೇಶಿ ಪಡೆಗಳು ದೀರ್ಘಕಾಲ ಆಫ್ಘನ್ನಲ್ಲಿರಲು ಅವಕಾಶವಿಲ್ಲ. ವಿದೇಶಿ ರಾಯಭಾರ ಕಚೇರಿಗಳಿಗೆ ಭದ್ರತೆ ನೀಡುತ್ತೇವೆ. ಅವರು ಕೆಲಸ ಮುಂದುವರಿಸಬೇಕು. ರಾಯಭಾರಿಗಳಿಗೆ ಸಂಪೂರ್ಣ ಭದ್ರತೆ ನೀಡುವ ಹೊಣೆ ನಮ್ಮದು ಎಂದು ತಾಲಿಬಾನ್ ಹೇಳಿಕೊಂಡಿದೆ.
ಅಫ್ಘಾನಿಸ್ತಾನದ ಜನರಿಗೆ ಕ್ಷಮಾದಾನ ಘೋಷಣೆ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಲು ಪ್ರಯತ್ನ ಸಾಗಿದೆ ಎಂದು ಜಬೀವುಲ್ಲಾ ಹೇಳಿಕೆ ನೀಡಿದ್ದು, ತಾಲಿಬಾನ್ಗೆ ದ್ರೋಹ ಬಗೆದವರ ಬಗ್ಗೆ ಈಗ ಮಾತನಾಡಲ್ಲ. ಸಮಯ ಬಂದಾಗ ತಾಲಿಬಾನ್ ಈ ಬಗ್ಗೆ ಮಾತನಾಡುತ್ತೆ ಎಂದು ಹೇಳಿದ್ದಾನೆ. ಅಂತೆಯೇ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಸಾವಿನ ಬಗ್ಗೆಯೂ ಮಾತನಾಡಿದ್ದು, ಯುದ್ಧದ ಸಮಯದಲ್ಲಿ ಡ್ಯಾನಿಶ್ ಸಿದ್ದಿಕಿ ಸಾವು ಸಂಭವಿಸಿದೆ. ಯಾರ ಬುಲೆಟ್ನಿಂದ ಸಾವು ಸಂಭವಿಸಿದೆ ಎಂದು ಗೊತ್ತಿಲ್ಲ. ಡ್ಯಾನಿಶ್ ಸಿದ್ದಿಕಿ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿಸಿದ್ದಾನೆ.
ಒಂದು ವೇಳೆ ಆಮೆರಿಕಾ ಪಡೆ ಆಗಸ್ಟ್ 31 ರ ಬಳಿಕವೂ ಅಫ್ಘನ್ನಲ್ಲಿದ್ದರೆ ತಾಲಿಬಾನ್ ನಾಯಕತ್ವ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೆ. ಪಂಜಶಿರ್ ಪ್ರಾಂತ್ಯದ ನಮ್ಮ ಸಹೋದರರು ಕಾಬೂಲ್ಗೆ ಬರಬೇಕು. ನಮ್ಮ ಇಬ್ಬರ ಗುರಿ ಒಂದೇ ಹೆದರಬೇಡಿ. ಹೋರಾಟ ಬೇಡ. ವಾಪಸ್ ಬನ್ನಿ ಎಂದು ಪಂಜಶಿರ್ ಪ್ರಾಂತ್ಯದ ನಾಯಕರಿಗೆ ತಾಲಿಬಾನ್ ಕರೆ ನೀಡಿದೆ.
ಪತ್ರಿಕಾಗೋಷ್ಠಿ ನಡೆಸಿದ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಚೀನಾ ದೇಶವನ್ನು ಹಾಡಿ ಹೊಗಳಿದ್ದು, ಚೀನಾ ನಮ್ಮ ಒಳ್ಳೆಯ ನೆರೆಹೊರೆಯ ದೇಶ. ಚೀನಾದೊಂದಿಗೆ ಅಫ್ಘಾನಿಸ್ತಾನದ ಹೊಸ ಸರ್ಕಾರ ಒಳ್ಳೆಯ ಸಂಬಂಧ ಹೊಂದುತ್ತದೆ ಎಂದಿದ್ದಾನೆ. ಇನ್ನು ಮಹಿಳೆಯರ ಬಗ್ಗೆ ಮಾತನಾಡಿ, ಉದ್ಯೋಗಸ್ಥ ಮಹಿಳೆಯರು ಮನೆಯಲ್ಲಿ ಇರುವುದು ತಾತ್ಕಾಲಿಕ ಎಲ್ಲವೂ ಶೀಘ್ರದಲ್ಲೇ ಸರಿಹೋಗಲಿದೆ ಎಂಬ ಭರವಸೆ ನೀಡಿದ್ದಾನೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…