ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ ‘ಇತ್ತಿಹಾದ್’ ರೈಲು ಸೇವೆಯ ಲೋಕೋ ಪೈಲಟ್ ಆಗಿ ಕೊಡಗು ಜಿಲ್ಲೆಯ ಮಾದಾಪುರ ಗ್ರಾಮದ ರಿಯಾಝ್ ನಝೀರ್ ಅವರು ಕಾರ್ಯನಿರ್ವಹಿಸಿದ್ದಾರೆ.
ಸಾರಿಗೆ ಇತಿಹಾಸದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಯು.ಎ.ಇ.ಯ ಹೊಸ ಪ್ರಯಾಣಿಕ ರೈಲು ಸಾರಿಗೆಯ ಪ್ರಥಮ ಯಾನಕ್ಕೆ ಪೈಲಟ್ ಆಗಿ ರಿಯಾಝ್ ಅವರನ್ನು ಅಲ್ಲಿನ ಆಡಳಿತ ನೇಮಕ ಮಾಡಿದೆ. ರಿಯಾಝ್ ಅವರು ಖತರ್ ಮೆಟ್ರೊ ಮತ್ತು ಖತರ್ ಟ್ರಾಮ್ ಸೇವೆಗಳ ಉದ್ಘಾಟನೆಯ ವೇಳೆ ಕೂಡ ಮೊದಲ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದರು.
“ಬಾಲ್ಯದ ಸಮಯದಲ್ಲಿ ಕನಿಷ್ಠ ಸೈಕಲ್ ಕೂಡ ನನಗೆ ಸಿಗಲಿಲ್ಲ. ಈಗ ಅತ್ಯಂತ ಜವಾಬ್ದಾರಿಯುತವಾದ ರೈಲು ಸೇವೆಯ ಪ್ರಥಮ ಯಾನದ ಪೈಲಟ್ ಆಗುವ ಯೋಗ ಸಿಕ್ಕಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ರಿಯಾಝ್ ಅವರು ಪ್ರತಿಕ್ರಿಯಿಸಿದ್ದಾರೆ.
ರಿಯಾಝ್ ಅವರು ಪ್ರಸ್ತುತ ಸುಂಟಿಕೊಪ್ಪದಲ್ಲಿ ವಾಸವಿರುವ ಹಾಜಿ ನಝೀರ್ ಮತ್ತು ರಹ್ಮತ್ ದಂಪತಿಯ ಪುತ್ರ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]