Featured

ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಪ್ರಧಾನಿ ಮೋದಿ.. ; 2020ಕ್ಕೆ ಮುಸ್ಲಿಂ ರಾಷ್ಟ್ರದಲ್ಲಿ ಹಾರಾಡಲಿದೆ ಕೇಸರಿ ಪತಾಕೆ..

ವಸುದೈವ ಕುಟುಂಬದ ತತ್ವ ಸಾಕಾರವಾಗುತ್ತಿದೆ ಎನ್ನುವುದಕ್ಕೆ ಅತ್ಯುತ್ತಮ ಉದಾರಹರಣೆಯಾಗಿ ನಿಂತಿರುವುದೇ ವಿಶ್ವದ ಅನೇಕ ರಾಷ್ಟ್ರಗಳು ಹಿಂದೂ ಧರ್ಮವನ್ನು ಅಪ್ಪಿಕೊಳ್ಳುತ್ತಿರುವುದು. ಅದರ ಜೊತೆಗೆ ತಮ್ಮ ರಾಷ್ಟ್ರಗಳಲ್ಲಿ ಹಿಂದೂ ದೇವಾಲಯಗಳನ್ನು ನಿರ್ಮಿಸುತ್ತಿರುವುದು!! ಇದೆಲ್ಲವೂ ಸಾಧ್ಯವಾಗಿರೋದು ಮಾತ್ರ ನರೇಂದ್ರ ಮೋದಿಯವರ ರಾಜತಾಂತ್ರಿಕತೆಯ ಯಶಸ್ಸಿನಿಂದಾಗಿ ಅನ್ನೋದು ಅಕ್ಷರಶಃ ನಿಜ..

ಕೆಲ ತಿಂಗಳುಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಯುನೈಟೆಡ್ ಅರಬ್ ಎಮರೈಟ್ಸ್ (ಯುಎಇ) ಜತೆ ಐದು ಮಹತ್ವದ ಒಪ್ಪಂದಗಳಿಗೆ ಅಂಕಿತ ಹಾಕಿದ್ದಾರಲ್ಲದೇ ಮುಸ್ಲಿಂ ರಾಷ್ಟ್ರ ಯುಎಇಯಲ್ಲಿ ಮೊದಲ ಹಿಂದೂ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಿ ಮುಸ್ಲಿಂ ರಾಷ್ಟ್ರದಲ್ಲಿರುವ ಏಕೈಕ ದೇವಾಲಯವನ್ನು ನಿರ್ಮಿಸಲು ಅಡಿಪಾಯವನ್ನು ಹಾಕಿದ್ದರು.. ಆದರೆ ಇದೀಗ ಅಬುಧಾಬಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊತ್ತ ಮೊದಲ ಹಿಂದೂ ದೇಗುಲ 2020ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅತೀ ದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಪ್ರಧಾನಿ ನರೇಂದ್ರ ಮೋದಿ ದುಬೈನ “ಬೊಚಸನ್ವಾಸಿ ಶ್ರೀ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥಾ (ಬಿಎಪಿಎಸ್)” ದೇವಾಲಯ ನಿರ್ಮಾಣ ಯೋಜನೆಯನ್ನು ಉದ್ಘಾಟನೆ ಮಾಡಿದ್ದರು!! 55 ಸಾವಿರ ಚದರ ಮೀಟರ್ ವಿಸ್ತೀರ್ಣ ಜಾಗದಲ್ಲಿ ನಿರ್ಮಾಣವಾಗಲಿರುವ ಅಬುಧಾಬಿಯಲ್ಲಿನ ಸ್ವಾಮೀ ನಾರಾಯಣ ದೇವಾಲಯದಲ್ಲಿ ಪ್ರಾರ್ಥನಾ ಮಂದಿರ, ಅಧ್ಯಯನ ಕೊಠಡಿ, ಮಕ್ಕಳಿಗಾಗಿ ಕ್ರೀಡಾಂಗಣ, ಉದ್ಯಾನವನ, ನೀರಿನ ಕಾರಂಜಿ, ಆಹಾರ ಮಳಿಗೆ, ಪುಸ್ತಕ ಮತ್ತು ಉಡುಗೊರೆ ನೀಡಲು ಮಳಿಗೆಗಳು ಈ ದೇವಾಲಯದ ಜಾಗದಲ್ಲಿ ಇರಲಿದೆ.

ಇತ್ತೀಚಿನ ದಿನಗಳಲ್ಲಿ ಹಿಂದೂ ಧರ್ಮಕ್ಕೆ ಮಾರುಹೋಗುವವರ ಸಂಖ್ಯೆ ಹೆಚ್ಚಾಗಿದ್ದು, ಅದಕ್ಕೆ ಸಾಕ್ಷಿ ಎನ್ನುವಂತೆ, ಶೇಕಡಾ 64ರಷ್ಟು ಕ್ರಿಶ್ಚಿಯನ್ನರೇ ತುಂಬಿ ತುಳುಕಾಡುತ್ತಿರುವ ಹಿಂದೂ ರಾಷ್ಟ್ರವೇ ಅಲ್ಲದ ಆಸ್ಟ್ರೇಲಿಯಾದಲ್ಲೂ ಹಿಂದೂ ಧರ್ಮದ ದೇವರುಗಳಿಗೆ ಅಲ್ಲಿನ ಸರ್ಕಾರವೇ ಮಾರು ಹೋಗಿದೆ. ಹೌದು… ಆಸ್ಟ್ರೇಲಿಯಾದ ವಿಕ್ಟೋರಿಯನ್ ಸರಕಾರವೇ ಶಿವ ವಿಷ್ಣು ದೇವಾಲಯ ನಿರ್ಮಿಸಲು 160,000 ಡಾಲರ್ ಹಣವನ್ನು ಸಹಾಯಧನ ನೀಡಿದೆ. ಅಷ್ಟೇ ಅಲ್ಲದೇ, ವಿಕ್ಟೋರಿಯಾದಲ್ಲಿರುವ ಹಿಂದೂ ಸೊಸೈಟಿಯ ಹಿಂದೂ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ಮತ್ತು ಶಿವ ವಿಷ್ಣು ದೇವಾಲಯದ ಅಭಿವೃದ್ಧಿಗೆ ವಿಕ್ಟೋರಿಯನ್ ಸರಕಾರ ಹಣ ನೀಡುವುದಾಗಿ ಘೋಷಣೆ ಮಾಡಿದೆ.

ಅಬುದಾಬಿ ರಾಜಕುಮಾರ ಮೊಹಮ್ಮದ್ ಬಿನ್ ಜಾಯೆಡ್ ಅಲ್ ನೆಹ್ಯಾನ್ ಅವರು ಜೈ ಶ್ರೀರಾಮ್ ಎನ್ನುವ ಮೂಲಕ ಭಾಷಣ ಆರಂಭಿಸಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗೆ ಪ್ರಧಾನಿ ನರೇಂದ್ರ ಮೋದಿಯವರು ತಾನು ವಿದೇಶಿ ಪ್ರವಾಸ ಕೈಗೊಂಡಿದ್ದೆಲ್ಲೆಡೆ ತನ್ನ ಧರ್ಮದ ಸಾರವನ್ನು ಎಲ್ಲೆಡೆ ಪ್ರಚುರ ಪಡಿಸುತ್ತಿದ್ದು, ಅದಕ್ಕೆ ಸಾಕ್ಷಿಯಾಗಿದೆ ಅಬುಧಾಬಿನಲ್ಲಿ ತಲೆಯೆತ್ತಲಿರುವ ದೇಗುಲ.

ಒಟ್ಟಿನಲ್ಲಿ ಮುಸ್ಲಿಂ ದೇಶದಲ್ಲಿ ತಲೆ ಎತ್ತಲಿರುವ ಮೊದಲ ದೇವಸ್ಥಾನ ಎಂದೆನಿಸಿಕೊಳ್ಳಲಿರುವ ದೇವಾಲಯವು ಯುಎಇನ ಅತೀ ದೊಡ್ಡ ಹಿಂದೂ ದೇವಾಲಯವಾಗಲಿದ್ದು, 2020ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮುಸ್ಲಿಂ ರಾಷ್ಟ್ರವಾಗಿರುವ ಅಬುಧಾಬಿನಲ್ಲಿ ಕೇಸರಿ ಪತಾಕೆ ಹಾರಾಡಲಿರುವುದಂತೂ  ನಿಜ.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago