Featured

ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ – vishwanews24

ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ

ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದು ಕೋಟ್ಯಧಿಪತಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ‘ಸರಣಿ 283’ರ ಈ ಬೃಹತ್ ಮೊತ್ತ ಒಲಿದಿದೆ. ಇದು ಯುಎಇಯ ದೀರ್ಘಕಾಲದ ರಾಫೆಲ್ ಡ್ರಾಗಳಲ್ಲಿ ಒಂದಾದ ಬಿಗ್ ಟಿಕೆಟ್ ಇತಿಹಾಸದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲಾಗಿದೆ.

ಇದನ್ನೂ ಓದಿ 👇👇

ವಿಶ್ವದಾದ್ಯಂತ ಕುತೂಹಲ ಕೆರಳಿಸಿದ್ದ ಈ ಲೈವ್ ಡ್ರಾವನ್ನು ಸಾವಿರಾರು ಜನರು ವೀಕ್ಷಿಸುತ್ತಿದ್ದರು. ಬಹುಮಾನ ಗೆದ್ದ ಸುದ್ದಿ ತಿಳಿಯುತ್ತಿದ್ದಂತೆ ಸಂಘಟಕರೊಂದಿಗೆ ಮಾತನಾಡಿದ ಶಂತನು ಶೆಟ್ಟಿಗಾರ್, “ಈ ಗೆಲುವಿನಿಂದ ಅತೀವ ಸಂತೋಷವಾಗಿದೆ. ಆದರೆ ಈ ಹಣವನ್ನು ಏನು ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ” ಎಂದು ತಿಳಿಸಿದರು.

ಅಲ್ಲದೆ, ಈ ಟಿಕೆಟ್ ಅನ್ನು ತಾವು ಒಬ್ಬರೇ ಖರೀದಿಸಿದ್ದಲ್ಲದೆ, ಸ್ನೇಹಿತನೊಬ್ಬನ ಜೊತೆಗೂಡಿ ಖರೀದಿಸಿದ್ದಾಗಿ ಅವರು ತಿಳಿಸಿದ್ದಾರೆ. ನಿಯಮದಂತೆ ಬಹುಮಾನದ ಮೊತ್ತವನ್ನು ಇಬ್ಬರೂ ಹಂಚಿಕೊಳ್ಳಲಿದ್ದಾರೆ. ಶಂತನು ಶೆಟ್ಟಿಗಾರ್ ಅವರು ಈ ಬೃಹತ್ ಮೊತ್ತದ ಮೂಲಕ ರಾತ್ರೋರಾತ್ರಿ ಬಿಗ್ ಟಿಕೆಟ್ ಇತಿಹಾಸದ ಹೊಸ ಮಿಲಿಯನೇರ್ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ 👇👇

 

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

11 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

12 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

12 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

14 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

14 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

14 hours ago