Featured

ಅಬುಧಾಬಿ ಹಿಂದೂ ದೇವಾಲಯ – ಭಕ್ತರಿಗೆ  ಮಾರ್ಗಸೂಚಿ ಪ್ರಕಟ – Vishwanews24

ಅಬುಧಾಬಿ ಹಿಂದೂ ದೇವಾಲಯ: ಭಕ್ತರಿಗೆ ಡ್ರೆಸ್ ಕೋಡ್ ಕಡ್ಡಾಯ

ಅಬುಧಾಬಿ: ಕಳೆದ ತಿಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ  ಅವರು ಉದ್ಘಾಟಿಸಿದ್ದ ಅಬುಧಾಬಿಯ ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸಂಸ್ಥಾ  ಮಂದಿರ ಮಾರ್ಚ್‌ 1ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಯಲ್ಲಿನ ಹಿಂದು ದೇವಾಲಯ ( ತನ್ನ ವೆಬ್‌ಸೈಟ್‌ನಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಯಾವ ರೀತಿಯ ಬಟ್ಟೆ ಧರಿಸಬೇಕು, ಯಾವೆಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎನ್ನುವುದನ್ನು ತಿಳಿಸಿದೆ.

ಡ್ರೆಸ್‌ಕೋಡ್‌
“ಕುತ್ತಿಗೆ, ಮೊಣಕೈ ಮತ್ತು ಪಾದಗಳ ನಡುವಿನ ದೇಹದ ಭಾಗ ಮುಚ್ಚಿರಬೇಕು. ಆಕ್ರಮಣಕಾರಿ ವಿನ್ಯಾಸಗಳನ್ನು ಹೊಂದಿರುವ ಟೋಪಿಗಳು, ಟೀ ಶರ್ಟ್‌ಗಳು ಮತ್ತು ಇತರ ಬಟ್ಟೆಗಳನ್ನು ಅನುಮತಿಸಲಾಗುವುದಿಲ್ಲ. ಅರೆ ಪಾರದರ್ಶಕ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬೇಡಿ. ಗಮನವನ್ನು ಬೇರೆಡೆಗೆ ಸೆಳೆಯುವ ಶಬ್ದಗಳು ಅಥವಾ ಪ್ರತಿಬಿಂಬಗಳನ್ನು ಉಂಟು ಮಾಡುವ ಬಟ್ಟೆ ಮತ್ತು ಪರಿಕರಗಳನ್ನು ತಪ್ಪಿಸಿ” ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಈ ನಿಯಮ ಗೊತ್ತಿರಲಿ
ದೇವಾಲಯದ ಒಳಕ್ಕೆ ಸಾಕು ಪ್ರಾಣಿಗಳಿಗೆ ಪ್ರವೇಶವಿಲ್ಲ. ಹೊರಗಿನ ಆಹಾರ ಮತ್ತು ಪಾನೀಯಗಳನ್ನು ದೇವಸ್ಥಾನದ ಸಂಕೀರ್ಣದ ಒಳಗೆ ತರುವಂತಿಲ್ಲ. ಅಲ್ಲದೆ ಡ್ರೋನ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಸೂಚಿಸಿದೆ. “ಪ್ರಶಾಂತ ವಾತಾವರಣವನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅಗತ್ಯʼʼ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ದುಬೈ– ಅಬುಧಾಬಿ ಶೇಖ್‌ ಜಾಯೆದ್‌ ಹೆದ್ದಾರಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡಿದೆ. ಫೆಬ್ರವರಿ 14ರಂದು ಸುಮಾರು 5,000 ಮಂದಿಯ ಉಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ದೇಗುಲವನ್ನು ಉದ್ಘಾಟಿಸಿದ್ದರು. ಮಾರ್ಚ್‌ 1ರಿಂದ ಪ್ರವಾಸಿಗರ ಭೇಟಿಗೆ ಮಂದಿರ ಮುಕ್ತವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ದೇವಾಲಯವ ತೆರೆದಿರಲಿದೆ. ಪ್ರತಿ ಸೋಮವಾರ ಮಂದಿರ ಮುಚ್ಚಿರಲಿದೆ.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago