ರಾಜ್ಯ ನ್ಯೂಸ್

ಅಭಯನ ಮೇಲೆ ಕೊಲೆಯಾದವನ ಹುಡುಗ್ನ ಮನೆಯವ್ರಿಗೆ ಡೌಟ್ ಇದ್ಯಂತೆ..!

ಉಡುಪಿ: ಅಡುಗೆ ಎಣ್ಣೆ ಸಾಗಿಸುವ ಕಾರ್ಗೋ ವಾಹನದ ಚಾಲಕ ನಾಪತ್ತೆಯಾಗಿದ್ದು, 20 ದಿನಗಳ ನಂತರ ಆತನ ಶವ ಕೊಲೆಗೈದ ಸ್ಥಿತಿಯಲ್ಲಿ ಬೆಂಗಳೂರು ಹೊರವಲಯದ ರಾಮನಗರದ ಕುಂಬಳಗೋಡು ಎಂಬಲ್ಲಿ ಪತ್ತೆಯಾಗಿದೆ. ಈಗ ಮೃತ ಚಾಲಕನ ಸಾವಿನ ಸುತ್ತಾ ಹಲವಾರು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಅನಿಲ್ ಮೃತ ದುರ್ದೈವಿ. ಈತ ಮೂಲತಃ ಉಡುಪಿಯ ಪೆರ್ಡೂರಿನವನಾಗಿದ್ದು, ವೃತ್ತಿಯಲ್ಲಿ ಕಾರ್ಗೋ ಲಾರಿ ಚಾಲಕನಾಗಿದ್ದನು. ಆಗಸ್ಟ್ 28 ರಂದು ಮಂಗಳೂರಿನಿಂದ ಬೆಂಗಳೂರಿಗೆ ರುಚಿಗೋಲ್ಡ್ ಆಯಿಲ್ ಹೊತ್ತು ಮಾಹಾವೀರ ಕಾರ್ಗೋ ಹೊರಟಿದ್ದ. ಆದರೆ ಕಾರ್ಗೋ ಬೆಂಗಳೂರು ತಲುಪಲಿಲ್ಲ. ಅನಿಲ್, ಲಾರಿ ಮತ್ತು ಲಕ್ಷಾಂತರ ರೂಪಾಯಿ ಎಣ್ಣೆ ನಾಪತ್ತೆಯಾಗಿತ್ತು. 20 ದಿನದ ಬಳಿಕ ಅನಿಲ್ ಮೃತದೇಹ ವಾಪಸ್ಸಾಗಿದೆ. ಈಗ ಕೊಲೆಯ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆದರೆ ಅನಿಲ್ ಕುಟುಂಬಸ್ಥರು ಕೊಲೆಯ ಹಿಂದೆ ಮಾಜಿ ಸಚಿವ ಅಭಯಚಂದ್ರ ಜೈನ್ ಕೈವಾಡವಿದೆ ಎಂದು ಆರೋಪಿದ್ದಾರೆ.

 

ಏನಿದು ಪ್ರಕರಣ?
ಅನಿಲ್ ಜಿಲ್ಲೆಯ ಕಾರ್ಕಳ ತಾಲೂಕಿನ ಪಾಡಿಗಾರ್ ನಿವಾಸಿ. ಪ್ರೀತಿಸಿ ಮದುವೆಯಾಗಿದ್ದ ಅನಿಲ್ ಪತ್ನಿ ಸಂಧ್ಯಾ ಹಾಗೂ ಪುಟ್ಟ ಮಗನ ಜೊತೆ ಚೊಕ್ಕ ಸಂಸಾರ ಕಟ್ಟಿಕೊಂಡಿದ್ದನು. ಚಾಲಕನಾಗಿದ್ದ ಅನಿಲ್ ಮಂಗಳೂರು ಜಿಲ್ಲೆಯ ಪಣಂಬೂರಿನಲ್ಲಿ ಇರುವ ಹೆಸರಾಂತ ಕಾರ್ಗೊ ಕಂಪೆನಿ ಸುಗಮದ ಮಹಾವೀರ ಕಾರ್ಗೋ ಸ್ ನಲ್ಲಿ ಎರಡು ವರ್ಷದಿಂದ ದುಡಿಯುತ್ತಿದ್ದನು. ಆಗಸ್ಟ್ 28 ರಂದು 7 ಲಕ್ಷ ಮೌಲ್ಯದ ಅಡುಗೆ ಎಣ್ಣೆ ತುಂಬಿದ ಲಾರಿ ಹತ್ತಿ ಬೆಂಗಳೂರು ಹೊರಟಿದ್ದನು.

ಆದರೆ ಆತ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆ ಹಾರ ದಾಟಿ ಮೇಲೆ ನೆಟ್ ವರ್ಕ್ ಜೊತೆ ಅನಿಲ್ ಕೂಡ ನಾಪತ್ತೆಯಾಗಿದ್ದಾನೆ. ಹುಡುಕಾಟ ನಡೆಸಿದ ನಂತರ ಪತ್ನಿ ಹೆಬ್ರಿ ಠಾಣೆಯಲ್ಲಿ ದೂರು ನೀಡಿದ್ದರು. ರುಚಿ ಗೋಲ್ಡ್ ಅಡುಗೆ ಎಣ್ಣೆ ಕಂಪೆನಿಯ ಮಾಲೀಕರು ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದರು. ಇದೇ ದೂರಿನ ಆಧರಿಸಿ ಪಣಂಬೂರು ಪೊಲೀಸರು ತನಿಖೆ ನಡೆಸಿದ್ದರು. ಇದಾಗಿ 20 ದಿನಗಳ ಬಳಿಕ ಅನಿಲ್ ಮೃತ ದೇಹ ರಾಮನಗರದ ಕುಂಬಳಗೋಡಿನಲ್ಲಿ ಪತ್ತೆಯಾಗಿದೆ. ಜೊತೆಗೆ ಕೆಲಸ ಮಾಡುತ್ತಿದ್ದ ಡ್ರೈವರ್ ಹಾಗೂ ಆತನ ಸಂಬಂಧಿಗಳು ಸೇರಿ ಕೊಲೆ ನಡೆಸಿ ಪ್ಲಾಸ್ಟಿಕ್ ಸುತ್ತಿ ಹೂತು ಹಾಕಿದ್ದಾರೆ ಎನ್ನುವುದು ಪೊಲೀಸ್ ಮೂಲದ ಮಾಹಿತಿಯಿಂದ ತಿಳಿದು ಬಂದಿದೆ.

ರಾಮನಗರದಲ್ಲಿ ಪತ್ತೆಯಾದ ಅನಿಲ್ ಮೃತ ದೇಹ ಮರಣೋತ್ತರ ಪರೀಕ್ಷೆ ಒಳಪಡಿಸಿದ ನಂತರ ಪಾರ್ಥಿವ ಶರೀರವನ್ನು ಮನೆಯವರಿಗೆ ಹಸ್ತಾಂತರ ಮಾಡಿದ್ದಾರೆ. ಮಗನ ಮೃತ ದೇಹಕ್ಕೆ ಅಂತಿಮ ವಿಧಿವಿಧಾನ ಜೊತೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಆದರೆ ಸಾವಿನ ಹಿಂದೆ ಮಹಾವೀರ ಟ್ರಾವೆಲ್ಸ್ ಮಾಲೀಕ ಮಾಜಿ ಸಚಿವ ಅಭಯ ಚಂದ್ರ ಜೈನ್ ಕೈವಾಡವಿದೆ. ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎಂದು ಅನಿಲ್ ಮನೆ ಮಂದಿ ಆರೋಪಿಸಿದ್ದಾರೆ. ಅಭಯ ಚಂದ್ರ ಜೈನ್, ಮಗ ನಾಪತ್ತೆಯಾದಾಗ ದೂರು ನೀಡಿಲ್ಲ. ಮಗನನ್ನೇ ಕಳ್ಳನಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ. ಸಾವಿನ ನಂತರ ಮನೆಗೂ ಭೇಟಿ ನೀಡಿಲ್ಲ ಎಂದು ಪೋಷಕರು ದೂರಿದ್ದಾರೆ.

ಪತಿ ನಾಪತ್ತೆಯಿಂದ ಕಂಗಾಲಾದ ಅನಿಲ್ ಪತ್ನಿ ಸಿಎಂಗೆ ದೂರು ನೀಡಿದ್ದರು. ಅನಿಲ್ ಕುಮಾರ್ ಗೆಳೆಯರ ಬಳಗ ಅನಿಲ್ ನಾಪತ್ತೆಯಾಗಿದ್ದಾನೆ ಹುಡುಕಿಕೊಡಿ ಅನ್ನುವ ಅಭಿಯಾನವನ್ನೇ ಆರಂಭಿಸಿದ್ದರು. ಆದರೆ ಏನು ಪ್ರಯೋಜವಾಗಿಲ್ಲ. ಅನಿಲ್ ಜೀವಂತವಾಗಿ ಮನೆ ತಲುಪಲಿಲ್ಲ.

ಸದ್ಯಕ್ಕೆ ಕೊಲೆಗಾರರು ಹಣ ಹಾಗೂ ಎಣ್ಣೆ ದೋಚುವಾಸೆಯಿಂದ ಕೊಲೆ ಮಾಡಿದರೇ, ಸಾವಿನ ಹಿಂದೆ ರಹಸ್ಯವಿದೆಯೇ? ಮಾಜಿ ಸಚಿವ ಅಭಯಚಂದ್ರ ಜೈನ್ ಪಾತ್ರವೇನು ಎಂಬೆಲ್ಲಾ ದೃಷ್ಟಿಕೋನದಲ್ಲಿ ತನಿಖೆ ಆಗಬೇಕಿದೆ ಎಂದು ಪೋಷಕರು ಆಗ್ರಹಿಸಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

14 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

15 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

15 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

15 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

15 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

15 hours ago