ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೀ ತಮಿಳು ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರಿಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸದ್ಯ ಸುದೀಪ್ ಅವರಿಗೆ ಈ ಪ್ರಶಸ್ತಿ ಸಿಕ್ಕಿದ್ದು, ಇದರಿಂದ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.
ಸಾಮಾನ್ಯವಾಗಿ ಸುದೀಪ್ ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಆದರೆ ಈಗ ಅವರು ತಮಿಳಿನ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರ ಅಭಿಮಾನಿಗಳಿಗೆ ಶಾಕ್ ಜೊತೆ ಖುಷಿ ಕೂಡ ಆಗಿದೆ. ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದೀಪ್ ತಮ್ಮ ಅನುಭವವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡರು.
ಜೀ ತಮಿಳು ವಾಹಿನಿಯ ‘ಜೀ ಸಿನಿ ಅವಾರ್ಡ್ಸ್ 2020’ ಯಲ್ಲಿ ‘ಕನ್ನಡ ಚಿತ್ರರಂಗದ ಹೆಮ್ಮೆ’ ಎಂಬ ಪ್ರಶಸ್ತಿಯನ್ನು ಸುದೀಪ್ ಪಡೆದಿದ್ದರೆ, ‘ಭಾರತೀಯ ಚಿತ್ರರಂಗದ ಹೆಮ್ಮೆ’ ಎಂಬ ಪ್ರಶಸ್ತಿಯನ್ನು ಕಮಲ್ ಹಾಸನ್ ಸ್ವೀಕರಿಸಿದ್ದಾರೆ. 2019ನೇ ಸಾಲಿನ ತಮಿಳು ಚಿತ್ರರಂಗದ ಅತ್ಯುತ್ತಮ ಕಲಾವಿದರು, ತಂತ್ರಜ್ಞರಿಗೆ ಇದೇ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೋನಿ ಕಪೂರ್, ಧನುಷ್, ಕಮಲ್ ಹಾಸನ್, ನಯನತಾರಾ, ಸುಹಾಸಿನಿ, ನಿವಿನ್ ಪೌಲ್, ಶ್ರೇಯಾ ಘೋಷಾಲ್, ವಿಜಯ್ ಸೇತುಪತಿ, ಸಮಂತಾ ಅಕ್ಕಿನೇನಿ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನಟರಾದ ವಿಜಯ್ ಸೇತುಪತಿ, ಧನುಷ್ ಹಾಗೂ ನಟಿ ನಯನತಾರಾ ಕೂಡ ಪ್ರಶಸ್ತಿಯನ್ನು ಪಡೆದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…