ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೀ ತಮಿಳು ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರಿಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸದ್ಯ ಸುದೀಪ್ ಅವರಿಗೆ ಈ ಪ್ರಶಸ್ತಿ ಸಿಕ್ಕಿದ್ದು, ಇದರಿಂದ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.
ಸಾಮಾನ್ಯವಾಗಿ ಸುದೀಪ್ ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಆದರೆ ಈಗ ಅವರು ತಮಿಳಿನ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರ ಅಭಿಮಾನಿಗಳಿಗೆ ಶಾಕ್ ಜೊತೆ ಖುಷಿ ಕೂಡ ಆಗಿದೆ. ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದೀಪ್ ತಮ್ಮ ಅನುಭವವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡರು.
ಜೀ ತಮಿಳು ವಾಹಿನಿಯ ‘ಜೀ ಸಿನಿ ಅವಾರ್ಡ್ಸ್ 2020’ ಯಲ್ಲಿ ‘ಕನ್ನಡ ಚಿತ್ರರಂಗದ ಹೆಮ್ಮೆ’ ಎಂಬ ಪ್ರಶಸ್ತಿಯನ್ನು ಸುದೀಪ್ ಪಡೆದಿದ್ದರೆ, ‘ಭಾರತೀಯ ಚಿತ್ರರಂಗದ ಹೆಮ್ಮೆ’ ಎಂಬ ಪ್ರಶಸ್ತಿಯನ್ನು ಕಮಲ್ ಹಾಸನ್ ಸ್ವೀಕರಿಸಿದ್ದಾರೆ. 2019ನೇ ಸಾಲಿನ ತಮಿಳು ಚಿತ್ರರಂಗದ ಅತ್ಯುತ್ತಮ ಕಲಾವಿದರು, ತಂತ್ರಜ್ಞರಿಗೆ ಇದೇ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೋನಿ ಕಪೂರ್, ಧನುಷ್, ಕಮಲ್ ಹಾಸನ್, ನಯನತಾರಾ, ಸುಹಾಸಿನಿ, ನಿವಿನ್ ಪೌಲ್, ಶ್ರೇಯಾ ಘೋಷಾಲ್, ವಿಜಯ್ ಸೇತುಪತಿ, ಸಮಂತಾ ಅಕ್ಕಿನೇನಿ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನಟರಾದ ವಿಜಯ್ ಸೇತುಪತಿ, ಧನುಷ್ ಹಾಗೂ ನಟಿ ನಯನತಾರಾ ಕೂಡ ಪ್ರಶಸ್ತಿಯನ್ನು ಪಡೆದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…