ಉಡುಪಿ

ಅಭಿವೃದ್ಧಿಗಾಗಿ ಜನರಿಂದ ಮತ್ತೂಮ್ಮೆ ಅವಕಾಶ: ಪ್ರಮೋದ್‌

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿ ಸಚಿವನಾಗಿ 2026 ಕೋ.ರೂ.ಗೂ ಮಿಕ್ಕಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದೇನೆ.

ಕಳೆದೈದು ವರ್ಷ ಅವಧಿಯಲ್ಲಿ 21,000 ಕುಟುಂಬಗಳಿಗೆ ಬಿಪಿಎಲ್‌ ಪಡಿತರ ಚೀಟಿ ವಿತರಣೆ, ತಾಂತ್ರಿಕ ಅಡಚಣೆ ಹೊರತುಪಡಿಸಿ 24 ಗಂಟೆಗಳ ನಿರಂತರ ವಿದ್ಯುತ್‌ ಒದಗಿಸಿದ್ದೇನೆ. ಈ ನೆಲೆಯಲ್ಲಿ ಮತ್ತೂಮ್ಮೆ ನನಗೆ ಮತದಾನ ಮಾಡುವುದರೊಂದಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮತದಾರರಲ್ಲಿ ವಿನಂತಿಸಿದರು.

ಮೂಡುಬೆಟ್ಟು, ನಿಟ್ಟೂರು, ಪೆರಂಪಳ್ಳಿ ಹಾಗೂ ಇಂದಿರಾನಗರದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರಗಳ ವಿತರಣೆ, ಹಳ್ಳಿಯ ಮೂಲೆ ಮೂಲೆಗಳಿಗೂ ಜೆ-ನರ್ಮ್ ಸರಕಾರಿ ಬಸ್‌ ಸೌಕರ್ಯ, ಸಂಪರ್ಕ ಸೇತುವೆಗಳ ನಿರ್ಮಾಣ, ಪ್ರವಾಸ ತಾಣ, ಬಂದರು ಅಭಿವೃದ್ಧಿ, ಸಮುದ್ರ ತೀರದಲ್ಲಿ ತಡೆಗೋಡೆ ನಿರ್ಮಾಣ, ಕ್ರೀಡಾಂಗಣ, ಬಡ ಕುಟುಂಬಗಳಿಗೆ ದಾನಿಗಳ ನೆರವಿನೊಂದಿಗೆ ಮನೆಗಳ ನಿರ್ಮಾಣ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸಿ ಉಡುಪಿ ಕ್ಷೇತ್ರವನ್ನು ನಂ. 1 ಕ್ಷೇತ್ರವನ್ನಾಗಿಸಿದ ಸಂತೃಪ್ತಿ ನನಗಿದೆ ಎಂದರು.

ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎ. ಗಪೂರ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಮುನಿಯಾಲು, ಎಐಸಿಸಿ ಸದಸ್ಯ ಅಮೃತ್‌ ಶೆಣೈ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ, ನಗರಸಭೆ ಅಧ್ಯಕ್ಷೆ ಮೀನಾಕ್ಷೀ ಮಾಧವ ಬನ್ನಂಜೆ, ಪಕ್ಷದ ಮುಖಂಡರಾದ ದಿವಾಕರ ಕುಂದರ್‌, ಭಾಸ್ಕರ ರಾವ್‌ ಕಿದಿಯೂರು, ಕೀರ್ತಿ ಶೆಟ್ಟಿ, ಜನಾರ್ದನ ಭಂಡಾರ್ಕಾರ್‌, ಹಾರ್ಮಿಸ್‌ ನೊರೋನ್ಹಾ, ಯುವರಾಜ್‌, ಸಂಧ್ಯಾ ತಿಲಕ್‌ರಾಜ್‌, ಪ್ರಶಾಂತ್‌ ಭಟ್‌, ಚಂದ್ರಿಕಾ ಶೆಟ್ಟಿ, ಜ್ಯೋತಿ ಹೆಬ್ಟಾರ್‌, ಪೃಥ್ವಿರಾಜ್‌ ಶೆಟ್ಟಿ, ಯತೀಶ್‌ ಕರ್ಕೇರ, ಹಸನ್‌, ಸುಜಯ ಪೂಜಾರಿ, ಗಣೇಶ್‌ ನೇರ್ಗಿ, ಗಣಪತಿ ಶೆಟ್ಟಿಗಾರ್‌, ಸಂಜೀವ ಜತ್ತನ್ನ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

11 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago