ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿ ಸಚಿವನಾಗಿ 2026 ಕೋ.ರೂ.ಗೂ ಮಿಕ್ಕಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದೇನೆ.
ಕಳೆದೈದು ವರ್ಷ ಅವಧಿಯಲ್ಲಿ 21,000 ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ, ತಾಂತ್ರಿಕ ಅಡಚಣೆ ಹೊರತುಪಡಿಸಿ 24 ಗಂಟೆಗಳ ನಿರಂತರ ವಿದ್ಯುತ್ ಒದಗಿಸಿದ್ದೇನೆ. ಈ ನೆಲೆಯಲ್ಲಿ ಮತ್ತೂಮ್ಮೆ ನನಗೆ ಮತದಾನ ಮಾಡುವುದರೊಂದಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮತದಾರರಲ್ಲಿ ವಿನಂತಿಸಿದರು.
ಮೂಡುಬೆಟ್ಟು, ನಿಟ್ಟೂರು, ಪೆರಂಪಳ್ಳಿ ಹಾಗೂ ಇಂದಿರಾನಗರದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರಗಳ ವಿತರಣೆ, ಹಳ್ಳಿಯ ಮೂಲೆ ಮೂಲೆಗಳಿಗೂ ಜೆ-ನರ್ಮ್ ಸರಕಾರಿ ಬಸ್ ಸೌಕರ್ಯ, ಸಂಪರ್ಕ ಸೇತುವೆಗಳ ನಿರ್ಮಾಣ, ಪ್ರವಾಸ ತಾಣ, ಬಂದರು ಅಭಿವೃದ್ಧಿ, ಸಮುದ್ರ ತೀರದಲ್ಲಿ ತಡೆಗೋಡೆ ನಿರ್ಮಾಣ, ಕ್ರೀಡಾಂಗಣ, ಬಡ ಕುಟುಂಬಗಳಿಗೆ ದಾನಿಗಳ ನೆರವಿನೊಂದಿಗೆ ಮನೆಗಳ ನಿರ್ಮಾಣ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸಿ ಉಡುಪಿ ಕ್ಷೇತ್ರವನ್ನು ನಂ. 1 ಕ್ಷೇತ್ರವನ್ನಾಗಿಸಿದ ಸಂತೃಪ್ತಿ ನನಗಿದೆ ಎಂದರು.
ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎ. ಗಪೂರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಎಐಸಿಸಿ ಸದಸ್ಯ ಅಮೃತ್ ಶೆಣೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ನಗರಸಭೆ ಅಧ್ಯಕ್ಷೆ ಮೀನಾಕ್ಷೀ ಮಾಧವ ಬನ್ನಂಜೆ, ಪಕ್ಷದ ಮುಖಂಡರಾದ ದಿವಾಕರ ಕುಂದರ್, ಭಾಸ್ಕರ ರಾವ್ ಕಿದಿಯೂರು, ಕೀರ್ತಿ ಶೆಟ್ಟಿ, ಜನಾರ್ದನ ಭಂಡಾರ್ಕಾರ್, ಹಾರ್ಮಿಸ್ ನೊರೋನ್ಹಾ, ಯುವರಾಜ್, ಸಂಧ್ಯಾ ತಿಲಕ್ರಾಜ್, ಪ್ರಶಾಂತ್ ಭಟ್, ಚಂದ್ರಿಕಾ ಶೆಟ್ಟಿ, ಜ್ಯೋತಿ ಹೆಬ್ಟಾರ್, ಪೃಥ್ವಿರಾಜ್ ಶೆಟ್ಟಿ, ಯತೀಶ್ ಕರ್ಕೇರ, ಹಸನ್, ಸುಜಯ ಪೂಜಾರಿ, ಗಣೇಶ್ ನೇರ್ಗಿ, ಗಣಪತಿ ಶೆಟ್ಟಿಗಾರ್, ಸಂಜೀವ ಜತ್ತನ್ನ ಮತ್ತಿತರರು ಉಪಸ್ಥಿತರಿದ್ದರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…